ಸಮ್ಮೇಳನಕ್ಕೆ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಡೆಯವರನ್ನು ಸ್ವಾಗತಿಸಿರುವುದು 
ರಾಜ್ಯ

ವಿರೋಧದ ನಡುವೆಯೂ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಶೃಂಗೇರಿಯಲ್ಲಿ ಚಾಲನೆ

ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.

ಬೆಂಗಳೂರು: ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.


ಶೃಂಗೇರಿಯಲ್ಲಿ ಎರಡು ದಿನಗಳ ಸಮ್ಮೇಳನಕ್ಕೆ ರಾಷ್ಟ್ರ ಧ್ವಜಾರೋಹಣದ ನೆರವೇರಿಸುವ ಮೂಲಕ ಸಾಹಿತಿ ಪುಟ್ಟಯ್ಯ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ಕಸಾಪ ಧ್ವಜಾರೋಹಣಗೈದರು.


ಚಿಂತಕ ಕಲ್ಕುಳಿ ವಿಠಲ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಸಲು ಒಪ್ಪದ ಕೆಲ ಬಲಪಂಥೀಯ ಸಂಘಟನೆಗಳು ಸಮ್ಮೇಳನ ನಡೆದಲ್ಲಿ ಶೃಂಗೇರಿ ಬಂದ್ ಮಾಡುವ, ವೇದಿಕೆಗೆ ನುಗ್ಗುವ ಬೆದರಿಕೆಗಳನ್ನೂ ಹಾಕಿವೆ. ಈ ಬೆದರಿಕೆಗಳ ಕಾರಣಕ್ಕೆ ನಾಡಿನ ಪ್ರಮುಖ ಸಾಹಿತಿಗಳು, ಪ್ರಗತಿಪರರು ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ವಿಗೆ ಪಣ ತೊಟ್ಟಿದ್ದಾರೆ. ಈಗಾಗಲೇ ನಾಡಿನ ವಿವಿಧ ಜಿಲ್ಲೆಗಳಿಂದ ಸಾಹಿತಿಗಳು, ಸಾಹಿತ್ಯಾಸಕ್ತರು ಜಿಲ್ಲೆಗೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT