ರಾಜ್ಯ

ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪನೆಗೆ ಸರ್ಕಾರ ಆದೇಶ

ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿಗಳನ್ನು ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸೇವಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿಗಳನ್ನು ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸೇವಾ ಇಲಾಖೆ ಸುತ್ತೋಲೆ ಹೊರಡಿಸಿದೆ.


ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪಿಸುವಂತೆ ಸ್ಥಳೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಆದೇಶ ನೀಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿ, ಪಂಚಾಯತ್ ಗಳು ಮತ್ತು ಇತರ ಕಚೇರಿಗಳು ಇದನ್ನು ತಕ್ಷಣದಿಂದಲೇ ಜಾರಿಗೆ ತರಬೇಕಿದೆ.


ಈ ಸಂಬಂಧ ಸ್ಥಳೀಯ ಆಯುಕ್ತರ ಕಚೇರಿಯಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದ್ದು ಇ-ಕಚೇರಿ ಜಾರಿಗೆ ತರಲು ಆಧಾರ್ ಮತ್ತು ಸಕಾಲ ಅಧಿಕಾರಿಗಳು ಸಹಾಯ ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT