ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ದಸರಾ ರೀತಿ ರಾಜ್ಯದಲ್ಲಿ ಮತ್ತಷ್ಟು ಉತ್ಸವ ನಡೆಸಲು ಸರ್ಕಾರ ಚಿಂತನೆ

ದಸರಾ ರೀತಿಯಲ್ಲಿಯೇ ರಾಜ್ಯದಲ್ಲಿ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರುಯಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ. 

ಹಂಪಿ: ದಸರಾ ರೀತಿಯಲ್ಲಿಯೇ ರಾಜ್ಯದಲ್ಲಿ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರುಯಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು, ಮೈಸೂರು ದಸರಾ ರೀತಿಯಲ್ಲಿಯೇ ಮುಂದಿನ ವರ್ಷ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ 

ಧಾರ್ಮಿಕ ನಾಯಕರು ಹಾಗೂ ಇತಿಹಾಸ ತಜ್ಞರು, ಸ್ಥಳೀಯ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಿ ಈ ಉತ್ಸವಗಳ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಮುಂದಿನ ವರ್ಷದ ಕ್ಯಾಲೆಂಡರ್ ನಲ್ಲಿ ಹಂಪಿ ಉತ್ಸವ, ಚಾಲುಕ್ಯ ಉತ್ಸವ, ಕಲ್ಯಾಣ ಕರ್ನಾಟಕ ಉತ್ಸವ, ಮೈಸೂರು ದಸರಾ ಹಾಗೂ ಕಿತ್ತೂರು ಉತ್ಸವಗಳ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಹಿಂದಿದ್ದ ಸರ್ಕಾರ ವಾರ್ಷಿಕ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಹಂಪಿ ಉತ್ಸವ ಅಷ್ಟೇ ಅಲ್ಲದೆ, ಕರ್ನಾಟಕ ಹೈದರಾಬಾದ್ ಭಾಗ ಹಾಗೂ ವಿಜಯಪುರ ಭಾಗಗಳಲ್ಲಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT