ರಾಜ್ಯ

ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ ಹಾಕಿಸುವುದು ಅಪರಾಧ: ಸಾರಿಗೆ ಇಲಾಖೆ 

ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಬೆಂಗಳೂರು: ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.


ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಖಾಸಗಿ ವಾಹನದ ಮೇಲೆ ಸದಸ್ಯತ್ವವನ್ನು ಮತ್ತು ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ನಿಯಮ 50 ಮತ್ತು 51ರ ಹಾಗೂ 1950 ಕಲಂ 3,4ರ ಉಲ್ಲಂಘನೆಯಾಗಲಿದೆ ಎಂದು ಉಚ್ಛ ನ್ಯಾಯಾಲಯದ ಆದೇಶದನ್ವಯ ಅಪರಾಧವಾಗಿದೆ.


ಆದ್ದರಿಂದ ಅನಧಿಕೃತ ನೋಂದಣಿ ಫಲಕಗಳನ್ನು ಕೂಡಲೇ ತೆರವುಗೊಳಿಸುವಂತೆ ವಾಹನ ಮಾಲೀಕರಿಗೆ ಸಾರಿಗೆ ಇಲಾಖೆ ಸೂಚಿಸಿದೆ. ಅಲ್ಲದೆ ಅನಧಿಕೃತ ನೋಂದಣಿ ಫಲಕಗಳನ್ನು ಅಳವಡಿಸಿಕೊಂಡಿರುವ ವಾಹನವು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದಲ್ಲಿ ಸಾರ್ವಜನಿಕರು ಅದರ ನೋಂದಣಿ ಫಲಕ ಸಮೇತ ಭಾವಚಿತ್ರವನ್ನು ತೆಗೆದುಕೊಂಡು 9449863459 ಸಂಖ್ಯೆಗೆ ವಾಟ್ಸ್ ಅಪ್ ಮಾಡಿದಲ್ಲಿ ಅಂತಹ ವಾಹನ ವಿರುದ್ಧ ನಿಯಮಾನುಸಾರ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT