ಮಂಗಳೂರು ಗಲಭೆ: ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯ! 
ರಾಜ್ಯ

ಮಂಗಳೂರು ಗಲಭೆ: ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯ! 

ಮಂಗಳೂರು ಗಲಭೆ ವಿಷಯವಾಗಿ ಮಾಜಿ ಸಿಎಂ  ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು: ಮಂಗಳೂರು ಗಲಭೆ ವಿಷಯವಾಗಿ ಮಾಜಿ ಸಿಎಂ  ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. 

ಸಿಡಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ಆದರೆ ರಾಜ್ಯದಲ್ಲಿ ಈ ವರೆಗೂ ಬಿಡುಗಡೆಯಾದ ಸಿಡಿಗಳ ಸಂಖ್ಯೆ ನೋಡಿದರೆ ಈ ವೇಳೆಗೆ ಅದೆಷ್ಟು ಜನ ಜೈಲಿಗೆ ಹೋಗಬೇಕಿತ್ತು, ಸಿಡಿಗಳು ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದು ವ್ಯಂಗ್ಯವಾಡಿದ್ದಾರೆ. 

ತಮ್ಮ ತಾತ್ಕಾಲಿಕ ಲಾಭಕ್ಕಾಗಿ ಕೆಲವರು ಜನರನ್ನ ದಾರಿ ತಪ್ಪಿಸುತ್ತಾರೆ, ಕುಮಾರಸ್ವಾಮಿ ಇದರಲ್ಲಿ ನಿಸ್ಸೀಮರು, ಘಟನೆ ನಡೆದ ಕೆಲವೇ ದಿನಗಳಲ್ಲಿ ಸಿಡಿ ಬಿಡುಗಡೆ ಮಾಡಬಹುದಿತ್ತು. ಸಿಡಿ ರೆಡಿ ಮಾಡಲು ಇಷ್ಟು ದಿನ ಬೇಕಿತ್ತಾ? ಎಂದು ಸದಾನಂದ ಗೌಡ ಪ್ರಶ್ನಿಸಿದ್ದಾರೆ. 

ಅವರ ಜನಕ್ಕೆ ಪೊಲೀಸ್ ವೇಷ ಹಾಕಿಸಿ ಎಲ್ಲಾ ವ್ಯವಸ್ಥೆ ಮಾಡಿ ಸಿಡಿ ತಯಾರಿಸಿರಬೇಕು ಎಂದು ಡಿವಿಎಸ್ ಹೇಳಿದ್ದು, ಸಿಡಿ ಬಿಡುಗಡೆ ಮಾಡಿರುವ ಹಿಂದೆ ದೊಡ್ಡ ಹುನ್ನಾರವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT