ಸಂಗ್ರಹ ಚಿತ್ರ 
ರಾಜ್ಯ

ಅವರೇ ಮೇಳ ಬೆಂಗಳೂರು ಸಂಸ್ಕೃತಿ ಅವಿಭಾಜ್ಯ ಅಂಗ: ಜ.16-26 ವರೆಗೆ ಮೇಳ ಆಯೋಜನೆ

ಸಿಲಿಕಾನ್ ಸಿಟಿ ಬೆಂಗಳೂರಿನ ಸಾಂಸ್ಕೃತಿಕತೆಗೆ ವೇದಿಕೆಯಾಗಿದ್ದ ವಿವಿಪುರಂನ ಅವರೇ ಮೇಳದ ಆಯೋಜನೆ ಕುರಿತಂತೆ ಭುಗಿಲೆದ್ದಿದ್ದ ವಿವಾದಕ್ಕೆ ಬಿಬಿಎಂಪಿ ಮೇಯರ್ ತೆರೆ ಎಳೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಾಂಸ್ಕೃತಿಕತೆಗೆ ವೇದಿಕೆಯಾಗಿದ್ದ ವಿವಿಪುರಂನ ಅವರೇ ಮೇಳದ ಆಯೋಜನೆ ಕುರಿತಂತೆ ಭುಗಿಲೆದ್ದಿದ್ದ ವಿವಾದಕ್ಕೆ ಬಿಬಿಎಂಪಿ ಮೇಯರ್ ತೆರೆ ಎಳೆದಿದೆ.

ಹೌದು.. ಇದೇ ಜನವರಿ 16 ರಿಂದ 26ರವರೆಗೆ ಬೆಂಗಳೂರಿನ ವಿವಿಪುರಂನಲ್ಲಿ ಮೇಳೆ ಆಯೋಜನೆಗೆ ಬಿಬಿಎಂಪಿ ಅನುಮತಿ ನೀಡಿದ್ದು, ಈ ಕುರಿತಂತೆ ಸ್ವತಃ ಮೇಯರ್ ಗೌತಮ್ ಕುಮಾರ್ ಅವರು ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. 

ಈ ಕುರಿತು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬಿಬಿಎಂಪಿ ಮೇಯರ್ ಎಂ ಗೌತಮ್ ಕುಮಾರ್ ಅವರು, 'ಅವರೆ ಮೇಳಕ್ಕೆ ಬಿಬಿಎಂಪಿ ಅನುಮತಿ ನೀಡಲಿದೆ.  ಕಡಲೆಕಾಯಿ ಪರಿಷೆ ಹಾಗೂ ಅವರೆ ಮೇಳ ಬೆಂಗಳೂರು ಸಂಸ್ಕೃತಿಯ ಅವಿಭಾಜ್ಯ ಅಂಗ. ಆದರೆ, ಅವರೆ ಮೇಳದಿಂದ ಕಸದ ಸಮಸ್ಯೆ ಆಗುತ್ತದೆ. ಅನುಮತಿ ನೀಡುವುದು ಬೇಡ ಎಂದು ಕೆಲವರು ಪಾಲಿಕೆಯಲ್ಲಿ ಚರ್ಚೆ ನಡೆಸಿದ್ದರು. ಇದಕ್ಕೆ ನಾನು ಬೆಂಬಲ ಸೂಚಿಸಿಲ್ಲ. ಅವರೆ ಮೇಳ ನಡೆಯುತ್ತದೆ' ಎಂದು ತಿಳಿಸಿದ್ದಾರೆ. 

ವಿವಿಪುರಂನಲ್ಲಿರುವ ವಾಸವಿ ಕಾಂಡಿಮೆಂಟ್ಸ್ ಪ್ರತಿ ವರ್ಷ ಈ ಮೇಳವನ್ನು ಆಯೋಜಿಸುತ್ತಿತ್ತು. ಪ್ರತಿವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಅವರೆ ಕಾಯಿ ಮೇಳವನ್ನು ವಾಸವಿ ಕಾಂಡಿಮೆಟ್ಸ್ ಏರ್ಪಡಿಸಿಕೊಂಡು ಬರುತ್ತದೆ. ಆದರೆ, ಈ ವರ್ಷ ಸ್ವಚ್ಛತೆಯ ಕಾರಣವೊಡ್ಡಿ ಮೇಳ ನಡೆಸಲು ಬಿಬಿಎಂಪಿ ಅನುಮತಿ ನೀಡುವುದಿಲ್ಲ ಎಂಬ ಸುದ್ದಿ ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ಸ್ವತಃ ಬಿಬಿಎಂಪಿ ಮೇಯರ್ ಈ ಕುರಿತ ವಿವಾದಕ್ಕೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT