ಗೌರಿ ಲಂಕೇಶ್ 
ರಾಜ್ಯ

ಗೌರಿ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಋಷಿಕೇಶ ದೇವ್ಡೇಕರ್ ಮಹಾರಾಷ್ಟ್ರ ನಂಟು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ಪೊಲೀಸರಿಂದ ಜಾರ್ಖಾಂಡಲ್ಲಿ ಬಂಧಿತನಾಗಿರುವ ಋಷಿಕೇಶ ದೇವ್ಡೇಕರ್'ಗೆ ಔರಂಗಾಬಾದ್ ನಲ್ಲಿರುವ ಪ್ರವಾಸಿ ತಾಣಗಳೊಂದಿಗೆ ನಂಟು ಹೊಂದಿದ್ದಾನೆಂದು ಮೂಲಗಳು ತಿಳಿಸಿವ. 

ಔರಂಗಾಬಾದ್: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ಪೊಲೀಸರಿಂದ ಜಾರ್ಖಾಂಡಲ್ಲಿ ಬಂಧಿತನಾಗಿರುವ ಋಷಿಕೇಶ ದೇವ್ಡೇಕರ್'ಗೆ ಔರಂಗಾಬಾದ್ ನಲ್ಲಿರುವ ಪ್ರವಾಸಿ ತಾಣಗಳೊಂದಿಗೆ ನಂಟು ಹೊಂದಿದ್ದಾನೆಂದು ಮೂಲಗಳು ತಿಳಿಸಿವ. 

ಪ್ರಕರಣ ಸಂಬಂಧ ತನಿಖಾ ಬೆಳವಣಿಗೆಗಳ ಬಗ್ಗೆ ಸರ್ಕಾರ ಗಮನ ಹರಿಸಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಹೇಳಿದ್ದಾರೆ. 

ಗೌರಿ ಲಂಕೇಶ್ ಹಂತಕರ ಇತರೆ ಹಂತಕರೊ ಹೇಗೆ ನಂಟು ಹೊಂದಿದ್ದರು ಹಾಗೂ ಅವರ ಸಂಚು ಏನಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ. 

2013ರಲ್ಲಿ ನರೇಂದ್ರ ದಾಬೋಲ್ಕರ್ ಹತ್ಯೆ, 2016ರಲ್ಲಿ ಗೋವಿಂದ್ ಪನ್ಸಾರೆ ಹಾಗೂ 2015ರಲ್ಲಿ ಎಂಎಂ ಕಲಬುರಗಿ ಹತ್ಯೆಯಾಗಿತ್ತು. ಇದಾದ ಬಳಿಕ 2017ರಲ್ಲಿ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಎಲ್ಲಾ ಹತ್ಯೆ ಪ್ರಕರಣದಲ್ಲೂ ದೇವ್ಡೇಕರ್ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಗೌರಿ ಹತ್ಯೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ದೇವ್ಡೇಕರ್ ಗೌರಿ ಹತ್ಯೆ ಬಳಿಕ ಔರಂಗಾಬಾದ್ ನಲ್ಲಿ ಪತ್ನಿ, ಪೋಷಕರು ಹಾಗೂ 7 ವರ್ಷದ ತನ್ನ ಪುತ್ರಿಯೊಂದಿಗೆ ನೆಲೆಯೂರಿದ್ದ. 

ಔರಂಗಾಬಾದ್ ನಲ್ಲಿ ಯೋಗಗುರು ಬಾಬಾ ರಾಮದೇವ್ ಅವರ ಪತಾಂಜಲಿ ಕಂಪನಿಯ ಉತನ್ನಗಳನ್ನು ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಔರಂಗಾಬಾದ್ ನಗರದಲ್ಲಿಯೇ ಪತಾಂಜಲಿ ವಸ್ತು ಮಾರಾಟ ಮಾಡಿ, ಜೀವನ ನಡೆಸುತ್ತಿದ್ದ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT