ಮೈಸೂರು ವಿವಿ ಪ್ರತಿಭಟನೆ ಫ್ರೀ ಕಾಶ್ಮೀರ್ ಫಲಕ ಹಿಡಿದ ವಿದ್ಯಾರ್ಥಿನಿಗೆ ಜಾಮೀನು 
ರಾಜ್ಯ

ಮೈಸೂರು ವಿವಿ ಪ್ರತಿಭಟನೆ 'ಫ್ರೀ ಕಾಶ್ಮೀರ್' ಫಲಕ ಹಿಡಿದ ವಿದ್ಯಾರ್ಥಿನಿಗೆ ಜಾಮೀನು

ದೆಹಲಿ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬುಧವಾರ ಸಂಜೆ ಮೈಸೂರು ವಿವಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿ ವಿವಾದ ಸೃಷ್ಟಿಸಿದ್ದ ನಳಿನಿ ಬಾಲಕುಮಾರ್'ಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಮೈಸೂರು: ದೆಹಲಿ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬುಧವಾರ ಸಂಜೆ ಮೈಸೂರು ವಿವಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿ ವಿವಾದ ಸೃಷ್ಟಿಸಿದ್ದ ನಳಿನಿ ಬಾಲಕುಮಾರ್'ಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಆಯೋಜಕರು ಹಾಗೂ ಇತರರ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲಾಗಿತ್ತು. ಫಲಕ ಹಿಡಿದದ್ದು ಯಾರೆನ್ನುವ ಕುರಿತು ತನಿಖೆ ಆರಂಭವಾಗಿತ್ತು. ಈ ನಡುವೆ ವಿವಿಯ ಹಳೆ ವಿದ್ಯಾರ್ಥಿನಿಯಾದ ನಳಿನ್ ಬಾಲಕುಮಾರ್ ವಿವಾದಾತ್ಮಕ ಫಲಕ ಹಿಡಿದದ್ದು ಎನ್ನುವುದು ಖಚಿತವಾಗುತ್ತಿದ್ದಂತೆಯೇ ಈಕೆಯ ಬಂಧನಕ್ಕೆ ಆಗ್ರ ಕೇಳಿ ಬಂದಿತ್ತು. 

ಈ ಹಿನ್ನೆಲೆಯಲ್ಲಿ ನಳಿನಿಯವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಬಳಿಕ ವಿಚಾರಣೆಗೆ ಹಾಜರಾದ ನಳಿನಿಯವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 

ನಾನು ಪತ್ರಿಕೋದ್ಯಮದ ವಿದ್ಯಾರ್ಥಿಯಾಗಿದ್ದು, ದೇಶದ ಬಗ್ಗೆ ಮತ್ತು ದೇಶದ ಜನರ ಬಗ್ಗೆ ಅತ್ಯಂತ ಕಾಳಜಿ ಮತ್ತು ಗೌರವವಿದೆ. ಮೈಸೂರು ವಿವಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಫಾರೀ ಕಾಶ್ಮೀರ್ ಎಂದು ನಾನೇ ಖುದ್ದಾಗಿ ಬರೆದು ಹಿಡಿದುಕೊಂಡಿದ್ದೆ. ಇತರ ರಾಜ್ಯಗಳಲ್ಲಿ ಹೇಗೆ ಜನ ನಿರ್ಭಯವಾಗಿ ಮತ್ತು ಸ್ವತಂತ್ರವಾಗಿ ಇದ್ದಾರೋ, ಅದೇ ರೀತಿ ಜಮ್ಮು ಮತ್ತು ಕಾಶ್ಮೀರದಲ್ಲೂ ಆಗಬೇಕು. ಈ ಒಂದು ಭಾವನೆಯಿಂದ ಫಲಕ ಹಿಡಿದುಕೊಂಡಿದ್ದೆ. ಸಾರ್ವಜವರಿಕರಲ್ಲಿ ಈ ಕುರಿತು ಗೊಂದಲ ಸೃಷ್ಟಿಯಾಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆಂದು ನಳಿನಿ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT