ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ 
ರಾಜ್ಯ

ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ

ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಬೆಂಗಳೂರು: ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಕೆರೆ ಸುತ್ತಲೂ  1 ಕಿ.ಮೀ ಉದ್ದದವರೆಗೆ ಸುಮಾರು  8,000 ಸಸಿಗಳನ್ನು 2 ಸಾವಿರ ನಾಗರಿಕರು, ವಿವಿಧ ಎನ್‌ಜಿಒಗಳ ಸ್ವಯಂಸೇವಕರು, ಕಾರ್ಪೊರೇಟರ್‌ಗಳು, ಬಿಬಿಎಂಪಿ ಅಧಿಕಾರಿಗಳು ಮತ್ತು ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಮತ್ತು ಮೇಯರ್ ಎಂ ಗೌತಮ್ ಕುಮಾರ್ ಅವರುಗಳು ನೆಟ್ಟು ಬೆಂಗಳೂರಿನ ವನಸಿರಿಯನ್ನು ಬೆಳೆಸಲು ಮುಂದಾಗಿದ್ದಾರೆ.

ನಗರವನ್ನು ಹಸಿರಾಗಿ ಮಾಡಲು "ಕೋಟಿ ವೃಕ್ಷ ಆಂದೋಲನ"ಸೈನ್ಯದ  ಸಂಸ್ಥಾಪಕ ಟಿ.ವಿ.ಸುರಭಿ, ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗಳೂರಿನಾದ್ಯಂತ ಸಣ್ಣ ದಟ್ಟ ಕಾಡುಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT