ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ 
ರಾಜ್ಯ

ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ

ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಬೆಂಗಳೂರು: ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಕೆರೆ ಸುತ್ತಲೂ  1 ಕಿ.ಮೀ ಉದ್ದದವರೆಗೆ ಸುಮಾರು  8,000 ಸಸಿಗಳನ್ನು 2 ಸಾವಿರ ನಾಗರಿಕರು, ವಿವಿಧ ಎನ್‌ಜಿಒಗಳ ಸ್ವಯಂಸೇವಕರು, ಕಾರ್ಪೊರೇಟರ್‌ಗಳು, ಬಿಬಿಎಂಪಿ ಅಧಿಕಾರಿಗಳು ಮತ್ತು ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಮತ್ತು ಮೇಯರ್ ಎಂ ಗೌತಮ್ ಕುಮಾರ್ ಅವರುಗಳು ನೆಟ್ಟು ಬೆಂಗಳೂರಿನ ವನಸಿರಿಯನ್ನು ಬೆಳೆಸಲು ಮುಂದಾಗಿದ್ದಾರೆ.

ನಗರವನ್ನು ಹಸಿರಾಗಿ ಮಾಡಲು "ಕೋಟಿ ವೃಕ್ಷ ಆಂದೋಲನ"ಸೈನ್ಯದ  ಸಂಸ್ಥಾಪಕ ಟಿ.ವಿ.ಸುರಭಿ, ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗಳೂರಿನಾದ್ಯಂತ ಸಣ್ಣ ದಟ್ಟ ಕಾಡುಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಭಾರೀ ಕಸರತ್ತು: ಸಿದ್ದು-ಡಿಕೆಶಿ ಬಣ ಸಮತೋಲನಕ್ಕೆ ಮಾಸ್ಟರ್‌ಪ್ಲ್ಯಾನ್, 11:11:11 ಫಾರ್ಮುಲಾಗೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಅಣ್ವಸ್ತ್ರ ಹೊಂದಲು ಅವಕಾಶವೇ ಇಲ್ಲ, ಶಾಂತಿ ಮಾತುಕತೆ ವಿಫಲವಾದರೆ ದಾಳಿ ಖಚಿತ: ಅಮೆರಿಕಾ ಎಚ್ಚರಿಕೆ

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

SCROLL FOR NEXT