ಮಹೇಶ್ 
ರಾಜ್ಯ

ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ: ಶಾಸಕ ಮಹೇಶ್

ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ. 

ಮೈಸೂರು: ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ. 

ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಬಿಎಸ್'ಪಿ ಬೆಂಬಲಿತ ವಿದ್ಯಾರ್ಥಿಗಳು ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸಹಕಾರ ಚಳುವಳಿಯನ್ನು ಆರಂಭಿಸುವ ಅಗತ್ಯವಿದೆ. ಕಳೆದ 64 ವರ್ಷಗಳಿಂದ ಈ ಭೂಮಿಯಲ್ಲಿ ಜನಿಸಿದ್ದೇನೆ. ನನ್ನ ಪೌರತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ. 

ಅಲ್ಲದೆ, ಎನ್ಆರ್'ಸಿಯನ್ನು ನೋಟು ನಿಷೇಧಕ್ಕೆ ಹೋಲಿಕೆ ಮಾಡಿರುವ ಅವರು, ಕೆಲ ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ಕೋಟ್ಯಾಂತರ ಜನರಿಗೆ ಸಮಸ್ಯೆಯುಂಟು ಮಾಡುವುದು ಅಸಂಬದ್ಧ ಎಂದು ತಿಳಿಸಿದ್ದಾರೆ. 

ಫ್ರೀ ಕಾಶ್ಮೀರ ನಾಮಫಲಕ ಹಿಡಿದ ಪ್ರಕರಣದಲ್ಲಿ ಪೊಲೀಸರು ತ್ವರಿಗತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಆದರೆ, ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಇನ್ನೂ ಪ್ರಗತಿ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT