ರಾಜ್ಯ

ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ: ಶಾಸಕ ಮಹೇಶ್

Manjula VN

ಮೈಸೂರು: ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ. 

ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಬಿಎಸ್'ಪಿ ಬೆಂಬಲಿತ ವಿದ್ಯಾರ್ಥಿಗಳು ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸಹಕಾರ ಚಳುವಳಿಯನ್ನು ಆರಂಭಿಸುವ ಅಗತ್ಯವಿದೆ. ಕಳೆದ 64 ವರ್ಷಗಳಿಂದ ಈ ಭೂಮಿಯಲ್ಲಿ ಜನಿಸಿದ್ದೇನೆ. ನನ್ನ ಪೌರತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ. 

ಅಲ್ಲದೆ, ಎನ್ಆರ್'ಸಿಯನ್ನು ನೋಟು ನಿಷೇಧಕ್ಕೆ ಹೋಲಿಕೆ ಮಾಡಿರುವ ಅವರು, ಕೆಲ ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ಕೋಟ್ಯಾಂತರ ಜನರಿಗೆ ಸಮಸ್ಯೆಯುಂಟು ಮಾಡುವುದು ಅಸಂಬದ್ಧ ಎಂದು ತಿಳಿಸಿದ್ದಾರೆ. 

ಫ್ರೀ ಕಾಶ್ಮೀರ ನಾಮಫಲಕ ಹಿಡಿದ ಪ್ರಕರಣದಲ್ಲಿ ಪೊಲೀಸರು ತ್ವರಿಗತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಆದರೆ, ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಇನ್ನೂ ಪ್ರಗತಿ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ. 

SCROLL FOR NEXT