ರಾಜ್ಯ

ಬೆಂಗಳೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಮನೆಗೆ ದುಷ್ಕರ್ಮಿಗಳಿಂದ ಹಾನಿ

Sumana Upadhyaya

ಬೆಂಗಳೂರು:ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಇಟ್ಟು, ಮನೆಗೆ‌ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.


ನರಸಿಂಹಮೂರ್ತಿ ಎಂಬುವವರಿಗೆ ಸೇರಿದ ದ್ವಿಚಕ್ರ ವಾಹನ, ಮನೆಗೆ ದುಷ್ಕರ್ಮಿಗಳು ಹಾನಿಗೊಳಿಸಿದ್ದು, ಅದೃಷ್ಟವಶಾತ್ ‌ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ನರಸಿಂಹಮೂರ್ತಿ ಅವರು ನಗರದ ದಾಸರಹಳ್ಳಿ ಬ್ಲಾಕ್  ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದಾರೆ ಎಂದು ತಿಳಿದು ಬಂದಿದೆ. 

SCROLL FOR NEXT