ಸಂಗ್ರಹ ಚಿತ್ರ 
ರಾಜ್ಯ

ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ "ಗೋ ಬ್ಯಾಕ್ ಅಮಿತ್ ಶಾ' ಚಳವಳಿ

ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಹುಬ್ಬಳ್ಳಿ: ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಇದೇ ತಿಂಗಳ 18ರಂದು ಸಿಎಎ ಪರವಾಗಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸುತ್ತಿರುವ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಧಾರವಾಡ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ, 'ಅಮಿತ್ ಶಾ ಗೋ ಬ್ಯಾಕ್‌ " ಪ್ರತಿಭಟನೆ ನಡೆಸಲು ಮತ್ತು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿವೆ.

ನಾವು ಮಂಗಳವಾರದಿಂದಲೇ ' ಅಮಿತ್ ಶಾ ಬರಬೇಡಿ ' ಅಭಿಯಾನವನ್ನು ಪ್ರಾರಂಭಿಸುತ್ತೇವೆ. ಜನವರಿ 18 ರಂದು ನಡೆಯಲಿರುವ ಪ್ರತಿಭಟನೆಯ ವಿವರಗಳನ್ನು ಒಂದೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಹದಾಯಿ ನ್ಯಾಯಮಂಡಳಿಯ ತೀರ್ಪನ್ನು ಕೇಂದ್ರ ಸರ್ಕಾರ ಇನ್ನೂ ಗೆಜೆಟ್‌ನಲ್ಲಿ ಪ್ರಕಟಿಸಿಲ್ಲ. ರಾಜ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಕ್ಕಾಗಿ ಕೇಂದ್ರದಿಂದ ಸಮರ್ಪಕ ಪರಿಹಾರ ಸಿಕ್ಕಿಲ್ಲ. ತನ್ನ ವೈಫಲ್ಯ ಮರೆಮಾಚಲು ಸಿಎಎ, ಎನ್ಆರ್ ಸಿ ಮೂಲಕ ಇಡೀ ದೇಶವನ್ನು ವಿಭಜಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಇದೇ ಕಾರಣಕ್ಕೆ ಅಮಿತ್ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT