ರಾಜ್ಯ

ಬೆಂಗಳೂರು: ಆತ್ಮರಕ್ಷಣೆಗೆ ಇಬ್ಬರು ರೌಡಿಗಳ ಕಾಲಿಗೆ ಗುಂಡು ಹೊಡೆದ ಸಿಸಿಬಿ ಪೊಲೀಸರು 

ಆತ್ಮರಕ್ಷಣೆಗಾಗಿ ಇಬ್ಬರು ರೌಡಿಗಳ ಮೊಣಕಾಲು ಕೆಳಗೆ ಕಾಲಿಗೆ ನಗರ ಅಪರಾಧ ವಿಭಾಗದ ಪೊಲೀಸರು ಸೋಮವಾರ ಬೆಳಗ್ಗೆ ಗುಂಡೇಟು ನೀಡಿದ ಘಟನೆ ನಡೆದಿದೆ.

ಬೆಂಗಳೂರು: ತಮ್ಮ ಆತ್ಮ ರಕ್ಷಣೆಗಾಗಿ ಇಬ್ಬರು ರೌಡಿಶೀಟರ್​​ಗಳ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬಿಟಿಎಂ ಲೇಔಟ್​​​ನ ರಂಕಾ ಕಾಲೋನಿ ಬಳಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ.


ಮಹೇಶ್​ ಅಲಿಯಾಸ್ ಹಂದಿ ಮಹೇಶ್ ಮತ್ತು ಸತೀಶ್ ಎಂಬ ರೌಡಿ ಶೀಟರ್ ಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.


ಆರೋಪಿ ಮಹೇಶ್ ವಿರುದ್ಧ 2 ಕೊಲೆ ಪ್ರಕರಣ ಸೇರಿ ಒಟ್ಟ 5 ಪ್ರಕರಣಗಳು ಹಾಗೂ ಸತೀಶ್ ವಿರುದ್ಧ 3 ಕೊಲೆ ಸೇರಿ 5 ಪ್ರಕರಣಗಳು ದಾಖಲಾಗಿದ್ದವು.

ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸ್ ರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರೂ, ಅವರು ಪೊಲೀಸ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು. 

ಗಾಯಗೊಂಡ ರೌಡಿಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT