ಬಂಡೀಪುರದಲ್ಲಿ ಮೊದಲ ಬಾರಿ ಚಿಪ್ಪುಹಂದಿ ಗೋಚರ... ಅಳಿವಿನಂಚಿನ ಪ್ರಾಣಿ ರಕ್ಷಣೆ 
ರಾಜ್ಯ

ಬಂಡೀಪುರದಲ್ಲಿ ಮೊದಲ ಬಾರಿ ಚಿಪ್ಪುಹಂದಿ ಗೋಚರ... ಅಳಿವಿನಂಚಿನ ಪ್ರಾಣಿ ರಕ್ಷಣೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಅಳಿವಿನ ಅಂಚಿನಲ್ಲಿರುವ ಚಿಪ್ಪುಹಂದಿ ಕಾಣಿಸಿಕೊಂಡಿದೆ.

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಚಿಪ್ಪುಹಂದಿ ಕಾಣಿಸಿಕೊಂಡ ಘಟನೆ, ಗುಂಡ್ಲುಪೇಟೆ ತಾಲೂಕಿನ ಹಂಗಳಪುರದ ಜಮೀನಿನಲ್ಲಿ ನಡೆದಿದೆ.

ಹಂಗಳಪುರ ಗ್ರಾಮದ ಜಮೀನೊಂದರ ಟೊಮೆಟೊ ಬೆಳೆಗೆ ಹಾಕಲಾಗಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಚಿಪ್ಪುಹಂದಿ ಸಿಲುಕಿಕೊಂಡು ನರಳಾಡುತ್ತಿತ್ತು. ಈ ವೇಳೆ ಅರಣ್ಯ ಇಲಾಖೆ ಮಾಹಿತಿ ಪಡೆದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.ಪ್ರಾಣಿಗಳನ್ನು ಪತ್ತೆಹಚ್ಚಲು ಕ್ಯಾಮೆರಾ ಟ್ರಾಪ್ ಸೇರಿದಂತೆ ಇನ್ನಿತರ ಸಮೀಕ್ಷೆ ನಡೆಸಿದಾಗಲೂ ಚಿಪ್ಪು ಹಂದಿ ಇರುವುದು ಪತ್ತೆಯಾಗಿರಲಿಲ್ಲ ಎಂದು ಉನ್ನತಮೂಲಗಳು ಸ್ಪಷ್ಟಪಡಿಸಿವೆ.‌ಬಲೆಗೆ ಚಿಪ್ಪುಹಂದಿ ಸಿಲುಕಿಕೊಂಡು ನರಳಾಡುತ್ತಿತ್ತುಹುಳ-ಹುಪ್ಪಟೆ, ಕೀಟಗಳನ್ನು ತಿಂದು ಬದುಕುವ ಈ ನಿಶಾಚಾರಿ ಪ್ರಾಣಿ ಬೇಟೆಗಾರರ ಕೆಂಗಣ್ಣಿಗೆ ಗುರಿಯಾಗಿ ಅಳಿವಿನಂಚಿನಲ್ಲಿದೆ.

-ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT