ವಿ.ಸೋಮಣ್ಣ 
ರಾಜ್ಯ

ವಸತಿ ಇಲಾಖೆಯಲ್ಲಿ ಗೋಲ್ಮಾಲ್ ಆಗಲು ಬಿಡುವುದಿಲ್ಲ: ಸಚಿವ ವಿ.ಸೋಮಣ್ಣ 

ಇನ್ಮುಂದೆ ವಸತಿ ಇಲಾಖೆಯಲ್ಲಿ ಗೋಲ್ಮಾಲ್ ನಡೆಯಲು ಬಿಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರು: ಇನ್ಮುಂದೆ ವಸತಿ ಇಲಾಖೆಯಲ್ಲಿ ಗೋಲ್ಮಾಲ್ ನಡೆಯಲು ಬಿಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ವಿಧಾನ ಸೌಧದಲ್ಲಿ ವಸತಿ ಇಲಾಖೆ ಕುರಿತ ಸಂಪುಟ ಉಪ ಸಮಿತಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಅರ್ಹರಿಗೆ ಮನೆ ಸಿಗಲಿ ಅನ್ನೋ ಕಾರಣಕ್ಕೆ ಸಮಿತಿ ರಚನೆ ಆಗಿದೆ.

ವಿವಿಧ ಸಚಿವರನ್ನು ಒಳಗೊಂಡಂತೆ ಸಮಿತಿಯ ಮೊದಲ ಸಭೆ ನಡೆಸಿದ್ದೇವೆ. ಸೂರಿಲ್ಲದ ಬಡವರಿಗೆ ಮನೆ ಸಿಗಬೇಕು ಅನ್ನೊದೆ ನಮ್ಮ ಆಶಯ ಎಂದ ತಿಳಿಸಿದರು

ವಿವಿಧ ಹೆಸರಿನಲ್ಲಿರುವ ವಸತಿ ಯೋಜನೆಗಳನ್ನು ಒಂದೇ ಸೂರಿನಡಿ ತರಲು ಸರ್ಕಾರ ಪ್ರಯತ್ನ ನಡೆಸಿದೆ , ವಸತಿ ಇಲಾಖೆಯಲ್ಲಿ ಅರ್ಹರಿಗೆ ಮನೆ ದೊರಕಿಸಿಕೊಡುವ ಉದ್ದೇಶದಿಂದ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸೂರಿಲ್ಲದ ಬಡವರಿಗೆ ಮನೆ ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಈಗಾಗಲೇ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಐದಾರು ತಿಂಗಳಲ್ಲಿ ವಸತಿ ಇಲಾಖೆಗೆ ಕಾಯಕಲ್ಪ ಕಲ್ಪಿಸಲಾಗುವುದು. ಅದಕ್ಕಾಗಿ ಸಂಪುಟ ಉಪ ಸಮಿತಿಯಲ್ಲಿ ಸುದೀರ್ಘ‌ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಪ್ರತಿ ಫ‌ಲಾನುಭವಿಗೆ ಆಧಾರ ಮತ್ತು ರೇಷನ್‌ ಕಾರ್ಡ್‌ ಲಿಂಕ್‌ ಮಾಡುವ ಮೂಲಕ ಅಕ್ರಮಕ್ಕೆ ತಡೆಯೊಡ್ಡಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT