ಸಂಗ್ರಹ ಚಿತ್ರ 
ರಾಜ್ಯ

ಅಂಕಪಟ್ಟಿ ನೀಡದೇ ಸತಾಯಿಸಿದ ರಾಣಿ ಚೆನ್ನಮ್ಮ ವಿ.ವಿ.ಗೆ ರೂ.1 ಲಕ್ಷ ದಂಡ: ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆ ಆದೇಶ

ಪದವಿ ಮುಗಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಅಂಕಪಟ್ಟಿ ನೀಡದೇ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿರುವುದರಿಂದ ದೂರುದಾರ ವಿದ್ಯಾರ್ಥಿನಿಗೆ ಪರಿಹಾರ ರೂಪವಾಗಿ 1 ಲಕ್ಷ ರೂ ಹಾಗೂ ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಬೆಳಗಾವಿ: ಪದವಿ ಮುಗಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಅಂಕಪಟ್ಟಿ ನೀಡದೇ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿರುವುದರಿಂದ ದೂರುದಾರ ವಿದ್ಯಾರ್ಥಿನಿಗೆ ಪರಿಹಾರ ರೂಪವಾಗಿ 1 ಲಕ್ಷ ರೂ ಹಾಗೂ ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಬಾಗಲಕೋಟೆಯ ಕೌಲಪೇಟ್ ಗ್ರಾಮದ ಗೀತಾ ಈರಪ್ಪ ಇಜಾರ್‌ದಾರ್ ಬಿ.ಕಾಂ ಪದವಿ ಪಡೆಯಲು ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಬಾಗಲಕೋಟೆಯಲ್ಲಿ ಪ್ರವೇಶ ಪಡೆದು ೨೦೧೫ ರಲ್ಲಿ ಉತ್ತೀರ್ಣರಾಗಿದ್ದಳು.

ಈ ವಿದ್ಯಾಲಯವು ಬಿ.ಕಾಂ ಪದವಿ ಪಾಸಾದ ಅಂಕಪಟ್ಟಿಗಳನ್ನು ಕೊಟ್ಟಿರಲಿಲ್ಲ, ಇದರಿಂದ ಅವಳ ಮುಂದಿನ ವಿದ್ಯಾಭ್ಯಾಸಕ್ಕೆ ಮತ್ತು ಯಾವುದೇ ಉದ್ಯೋಗ ಪಡೆಯಲು ಅರ್ಜಿ ಸಲ್ಲಿಸಲು ಅಂಕಪಟ್ಟಿ ಇಲ್ಲದ ಕಾರಣ ತೊಂದರೆ ಉಂಟಾಗಿತ್ತು. ಇದರಿಂದ ಈಕೆ ಉದ್ಯೋಗದ ಅವಕಾಶಗಳಿಂದ ವಂಚಿತಳಾಗಿ ನೊಂದು ಪರಿಹಾರ ಕೋರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮುಂದೆ 2018ರ ಏಪ್ರಿಲ್ 24 ರಂದು ದೂರು ದಾಖಲಿಸಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel