ಸಂಗ್ರಹ ಚಿತ್ರ 
ರಾಜ್ಯ

ಅಂಕಪಟ್ಟಿ ನೀಡದೇ ಸತಾಯಿಸಿದ ರಾಣಿ ಚೆನ್ನಮ್ಮ ವಿ.ವಿ.ಗೆ ರೂ.1 ಲಕ್ಷ ದಂಡ: ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆ ಆದೇಶ

ಪದವಿ ಮುಗಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಅಂಕಪಟ್ಟಿ ನೀಡದೇ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿರುವುದರಿಂದ ದೂರುದಾರ ವಿದ್ಯಾರ್ಥಿನಿಗೆ ಪರಿಹಾರ ರೂಪವಾಗಿ 1 ಲಕ್ಷ ರೂ ಹಾಗೂ ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಬೆಳಗಾವಿ: ಪದವಿ ಮುಗಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಅಂಕಪಟ್ಟಿ ನೀಡದೇ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿರುವುದರಿಂದ ದೂರುದಾರ ವಿದ್ಯಾರ್ಥಿನಿಗೆ ಪರಿಹಾರ ರೂಪವಾಗಿ 1 ಲಕ್ಷ ರೂ ಹಾಗೂ ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಬಾಗಲಕೋಟೆಯ ಕೌಲಪೇಟ್ ಗ್ರಾಮದ ಗೀತಾ ಈರಪ್ಪ ಇಜಾರ್‌ದಾರ್ ಬಿ.ಕಾಂ ಪದವಿ ಪಡೆಯಲು ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಬಾಗಲಕೋಟೆಯಲ್ಲಿ ಪ್ರವೇಶ ಪಡೆದು ೨೦೧೫ ರಲ್ಲಿ ಉತ್ತೀರ್ಣರಾಗಿದ್ದಳು.

ಈ ವಿದ್ಯಾಲಯವು ಬಿ.ಕಾಂ ಪದವಿ ಪಾಸಾದ ಅಂಕಪಟ್ಟಿಗಳನ್ನು ಕೊಟ್ಟಿರಲಿಲ್ಲ, ಇದರಿಂದ ಅವಳ ಮುಂದಿನ ವಿದ್ಯಾಭ್ಯಾಸಕ್ಕೆ ಮತ್ತು ಯಾವುದೇ ಉದ್ಯೋಗ ಪಡೆಯಲು ಅರ್ಜಿ ಸಲ್ಲಿಸಲು ಅಂಕಪಟ್ಟಿ ಇಲ್ಲದ ಕಾರಣ ತೊಂದರೆ ಉಂಟಾಗಿತ್ತು. ಇದರಿಂದ ಈಕೆ ಉದ್ಯೋಗದ ಅವಕಾಶಗಳಿಂದ ವಂಚಿತಳಾಗಿ ನೊಂದು ಪರಿಹಾರ ಕೋರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮುಂದೆ 2018ರ ಏಪ್ರಿಲ್ 24 ರಂದು ದೂರು ದಾಖಲಿಸಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT