ಬಿ.ಎಸ್.ಯಡಿಯೂರಪ್ಪ 
ರಾಜ್ಯ

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಶಿಕಾರಿಪುರ: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ತಾವು ಅಧಿಕಾರಕ್ಕೆ ಬಂದ ಮೇಲೆ ಇದು ಮೊದಲ ಬಜೆಟ್ ಆಗಿದೆ. ಮುಖ್ಯಮಂತ್ರಿಯಾಗಿ ಇದು ತಮ್ಮ ಏಳನೇ ಬಜೆಟ್ ಆಗಿರಲಿದೆ ಎಂದರು.

ಬಜೆಟ್ ತಯಾರಿ ನಡೆಯುತ್ತಿದೆ ಮತ್ತು ರೈತರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಕೃಷಿ ಕ್ಷೇತ್ರಕ್ಕೆ ವಿಶೇಷ ಗಮನ ಹರಿಸಲಾಗುತ್ತದೆ. ಅಲ್ಲದೆ ಎಸ್‌ಸಿ / ಎಸ್‌ಟಿ ಮತ್ತು ಇತರ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು ಎಂದೂ ಅವರು ಹೇಳಿದ್ದಾರೆ.

"ಬಜೆಟ್ ಮಂಡಿಸಲು ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಫೆಬ್ರವರಿ ಕೊನೆಯ ವಾರದೊಳಗೆ ಇದು ಅಂತಿಮ ಆಕಾರವನ್ನು ಪಡೆಯಲಿದೆ. " ಸಿಎಂ ಹೇಳಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ಬಗೆಗೆ ಕೇಳಿದಾಗ "ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಲಿದ್ದು  ಶಾ ಅವರೊಂದಿಗೆ ಸಮಾಲೋಚಿಸಿದ ನಂತರ ವಷ್ಟೇ ಸಚಿವ ಸಂಪುಟ ವಿಸ್ತರಣೆ ಬಗೆಗೆ ತೀರ್ಮಾನಿಸಲಾಗುತ್ತದೆ" ಎಂದಿದ್ದಾರೆ.

ರಾಜೀನಾಮೆ ಕುರಿತು ಮಂಗಳವಾರ ನೀಡಿದ್ದ ಹೇಳಿಕೆ ಬಗೆಗೆ ಮುಖ್ಯಮಂತ್ರಿಗಳನ್ನು ಕೇಳಿದಾಗ ಅವರು ಪ್ರತಿಕ್ರಯಿಸಲು ನಿರಾಕರಿಸಿದ್ದಾರೆ. ಲಿಂಗಾಯತ ಸಮುದಾಯದ ಪಂಚಮಾಸಲಿ ಪಂಥಕ್ಕೆ ಮೀಸಲಾತಿ ನೀಡುವ ಕುರಿತು ಮಾತನಾಡಲು ಅವರು ನಿರಾಕರಿಸಿದ್ದಾರೆ. 

ಹೂಡಿಕೆದಾರರ ಭೇಟಿಯಲ್ಲಿ ಪಾಲ್ಗೊಳ್ಳಲು ಜನವರಿ 19 ರಂದು ದಾವೋಸ್‌ಗೆ ತೆರಳಲಿದ್ದೇನೆ ಮತ್ತು ಜನವರಿ 23 ರೊಳಗೆ ಮರಳಲಿದ್ದೇನೆ ಎಂದು ಅವರು ಹೇಳಿದರು

ಸುದ್ದಿಗೋಷ್ಟಿಯ ವೇಳೆ ಸಿಎಂ ಅವರ ಪುತ್ರ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಸಹ ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!