ನಳಿನಿ ಬಾಲಕುಮಾರ್ 
ರಾಜ್ಯ

ಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಕಾಲತ್ತಿಗೆ ವಕೀಲರ ಸಂಘ ನಿರಾಕರಣೆ

ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ. 

ಮೈಸೂರು: ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ. 

ನಳಿನಿ ವಿರುದ್ಧ ದೇಶದ್ರೋಹದ ಆರೋಪ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಕೀಲರ ಸಂಘ ತಿಳಿಸಿದೆ. 

ಮಾನಸಗಂಗೋತ್ರಿಯಲ್ಲಿ ಜ.8 ರಂದು ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಸಂಬಂಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದಿದ್ದ ಮೈಸೂರು ವಿವಿಯ ಹಳೇ ವಿದ್ಯಾರ್ಥಿನಿಯೂ ಆಗಿರುವ ನಳಿನಿ, ಪೊಲೀಸರ ಎದುರು ಹಾಜರಾಗಿ ತಮ್ಮ ಹೇಳಿಕೆಯನ್ನೂ ದಾಖಲಿಸಿದ್ದಳು. ಆದರೆ ನಳಿನಿ ವಿರುದ್ಧ ದೇಶದ್ರೋಹದ ಆರೋಪ ಇರುವ ಹಿನ್ನೆಲೆಯಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ, ಮೈಸೂರು ನಗರ ವಕೀಲರ ವಿವಧೋದ್ದೇಶ ಸಹಕಾರ ಸಂಘ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೈಸೂರು ನಗರ ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಆನಂದ್ ತಿಳಿಸಿದ್ದಾರೆ. 

ಈ ನಡುವೆ ನಳಿನಿಗೆ ಮಧ್ಯಂತರ ಜಾಮೀನು ಕೊಡಿಸಿದ್ದ ವಕೀಲ ಪೃಥ್ವಿ ಕಿರಣ ಶೆಟ್ಟಿ ಕೂಡ ಮುಂದೆ ಆಕೆ ಪರ ವಕಾಲತ್ತಿನಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಮೈಸೂರು ವಕೀಲರ ಸಂಘದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT