ನಳಿನಿ ಬಾಲಕುಮಾರ್ 
ರಾಜ್ಯ

ಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಕಾಲತ್ತಿಗೆ ವಕೀಲರ ಸಂಘ ನಿರಾಕರಣೆ

ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ. 

ಮೈಸೂರು: ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ. 

ನಳಿನಿ ವಿರುದ್ಧ ದೇಶದ್ರೋಹದ ಆರೋಪ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಕೀಲರ ಸಂಘ ತಿಳಿಸಿದೆ. 

ಮಾನಸಗಂಗೋತ್ರಿಯಲ್ಲಿ ಜ.8 ರಂದು ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಸಂಬಂಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದಿದ್ದ ಮೈಸೂರು ವಿವಿಯ ಹಳೇ ವಿದ್ಯಾರ್ಥಿನಿಯೂ ಆಗಿರುವ ನಳಿನಿ, ಪೊಲೀಸರ ಎದುರು ಹಾಜರಾಗಿ ತಮ್ಮ ಹೇಳಿಕೆಯನ್ನೂ ದಾಖಲಿಸಿದ್ದಳು. ಆದರೆ ನಳಿನಿ ವಿರುದ್ಧ ದೇಶದ್ರೋಹದ ಆರೋಪ ಇರುವ ಹಿನ್ನೆಲೆಯಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ, ಮೈಸೂರು ನಗರ ವಕೀಲರ ವಿವಧೋದ್ದೇಶ ಸಹಕಾರ ಸಂಘ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೈಸೂರು ನಗರ ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಆನಂದ್ ತಿಳಿಸಿದ್ದಾರೆ. 

ಈ ನಡುವೆ ನಳಿನಿಗೆ ಮಧ್ಯಂತರ ಜಾಮೀನು ಕೊಡಿಸಿದ್ದ ವಕೀಲ ಪೃಥ್ವಿ ಕಿರಣ ಶೆಟ್ಟಿ ಕೂಡ ಮುಂದೆ ಆಕೆ ಪರ ವಕಾಲತ್ತಿನಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಮೈಸೂರು ವಕೀಲರ ಸಂಘದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT