ರಾಜ್ಯ

ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರ ವ್ಯಾಪಕ ವಿರೋಧ: ಇಂದು ಕಾರವಾರ ಬಂದ್ 

ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ.

ಕಾರವಾರ(ಉತ್ತರ ಕನ್ನಡ): ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ.


ಜಿಲ್ಲೆಯ ವಾಣಿಜ್ಯ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಮೀನುಗಾರರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.


ಬಂದ್​ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವಾಹನ, ಆಟೋ ಸಂಚಾರ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಸ್ಥಗಿತವಾಗಲಿವೆ. 
ಸಾಗರಮಾಲಾ ಯೋಜನೆಯಡಿ ಈಗಾಗಲೇ ನಗರದ ರವೀಂದ್ರನಾಥ ಕಡಲ ತೀರದಲ್ಲಿ ಕಾಮಗಾರಿ ಆರಂಭವಾಗಿದ್ದು. ಇದಕ್ಕೆ ಸ್ಥಳೀಯ ಮೀನುಗಾರರು ವಿರೋಧ ಮಾಡುತ್ತಲೇ ಬಂದಿದ್ದಾರೆ.

ಕಾಮಗಾರಿಯನ್ನು ಸ್ಥಗಿತ ಮಾಡದ ಹಿನ್ನಲೆಯಲ್ಲಿ ಮೀನುಗಾರರು ಮೀನು ಮಾರಾಟ ಸ್ಥಗಿತಗೊಳಿಸಿದ್ದು ಇಂದು ಬಂದ್ ಗೆ ಕರೆ ಕೊಟ್ಟಿದ್ದಾರೆ. ಮೀನುಗಾರರ ಬಂದ್ ಕರೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಅಮೆರಿಕ ನೌಕಾಪಡೆ ದಿಗ್ಬಂಧನ ಜಾರಿ; ಬಂದರುಗಳಲ್ಲಿ ನಿರ್ಬಂಧ ಖಚಿತಪಡಿಸಿದ ಯುಕೆ!

IPL 2026: ರಾಜಸ್ಥಾನದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 57 ರನ್ ಗಳ ಜಯ; ಒಂದೇ ಓವರ್ ನಲ್ಲಿ 3 ವಿಕೆಟ್; ಚರಿತ್ರೆ ಸೃಷ್ಟಿಸಿದ ಪ್ರಫುಲ್ ಹಿಂಗೆ

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

SCROLL FOR NEXT