ರಾಜ್ಯ

ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರ ವ್ಯಾಪಕ ವಿರೋಧ: ಇಂದು ಕಾರವಾರ ಬಂದ್ 

ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ.

ಕಾರವಾರ(ಉತ್ತರ ಕನ್ನಡ): ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ.


ಜಿಲ್ಲೆಯ ವಾಣಿಜ್ಯ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಮೀನುಗಾರರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.


ಬಂದ್​ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವಾಹನ, ಆಟೋ ಸಂಚಾರ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಸ್ಥಗಿತವಾಗಲಿವೆ. 
ಸಾಗರಮಾಲಾ ಯೋಜನೆಯಡಿ ಈಗಾಗಲೇ ನಗರದ ರವೀಂದ್ರನಾಥ ಕಡಲ ತೀರದಲ್ಲಿ ಕಾಮಗಾರಿ ಆರಂಭವಾಗಿದ್ದು. ಇದಕ್ಕೆ ಸ್ಥಳೀಯ ಮೀನುಗಾರರು ವಿರೋಧ ಮಾಡುತ್ತಲೇ ಬಂದಿದ್ದಾರೆ.

ಕಾಮಗಾರಿಯನ್ನು ಸ್ಥಗಿತ ಮಾಡದ ಹಿನ್ನಲೆಯಲ್ಲಿ ಮೀನುಗಾರರು ಮೀನು ಮಾರಾಟ ಸ್ಥಗಿತಗೊಳಿಸಿದ್ದು ಇಂದು ಬಂದ್ ಗೆ ಕರೆ ಕೊಟ್ಟಿದ್ದಾರೆ. ಮೀನುಗಾರರ ಬಂದ್ ಕರೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

Bandipur-Nagarahole ಸಫಾರಿ ಮತ್ತೆ ಆರಂಭ: ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ಅನುಮತಿ, GPA ಟ್ರ್ಯಾಕಿಂಗ್ ಕಡ್ಡಾಯ..!

15 ಜಿಲ್ಲೆಗಳಲ್ಲಿ ‘ನಲಿ-ಕಲಿ’ ಕಾರ್ಯಕ್ರಮ ರದ್ದು: ದ್ವಿಭಾಷಾ ಪಠ್ಯಕ್ರಮ ಜಾರಿಗೆ ಸರ್ಕಾರ ಮುಂದು..!

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

SCROLL FOR NEXT