ರಾಜ್ಯ

ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರ ವ್ಯಾಪಕ ವಿರೋಧ: ಇಂದು ಕಾರವಾರ ಬಂದ್ 

ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ.

ಕಾರವಾರ(ಉತ್ತರ ಕನ್ನಡ): ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ.


ಜಿಲ್ಲೆಯ ವಾಣಿಜ್ಯ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಮೀನುಗಾರರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.


ಬಂದ್​ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವಾಹನ, ಆಟೋ ಸಂಚಾರ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಸ್ಥಗಿತವಾಗಲಿವೆ. 
ಸಾಗರಮಾಲಾ ಯೋಜನೆಯಡಿ ಈಗಾಗಲೇ ನಗರದ ರವೀಂದ್ರನಾಥ ಕಡಲ ತೀರದಲ್ಲಿ ಕಾಮಗಾರಿ ಆರಂಭವಾಗಿದ್ದು. ಇದಕ್ಕೆ ಸ್ಥಳೀಯ ಮೀನುಗಾರರು ವಿರೋಧ ಮಾಡುತ್ತಲೇ ಬಂದಿದ್ದಾರೆ.

ಕಾಮಗಾರಿಯನ್ನು ಸ್ಥಗಿತ ಮಾಡದ ಹಿನ್ನಲೆಯಲ್ಲಿ ಮೀನುಗಾರರು ಮೀನು ಮಾರಾಟ ಸ್ಥಗಿತಗೊಳಿಸಿದ್ದು ಇಂದು ಬಂದ್ ಗೆ ಕರೆ ಕೊಟ್ಟಿದ್ದಾರೆ. ಮೀನುಗಾರರ ಬಂದ್ ಕರೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ; ಶೀಘ್ರದಲ್ಲೇ ರಾಜ್ಯಪಾಲರ ಭೇಟಿ

ಮಂಗಳೂರು: ಆಯಾತಪ್ಪಿ ಬಸ್‌ನಿಂದ ಬಿದ್ದ ತಾಯಿ ಮಗು; ಕೂಡಲೇ ಪ್ರಯಾಣಿಕರನ್ನು ಇಳಿಸಿ ಆಸ್ಪತ್ರೆಗೆ ಸೇರಿಸಿದ ಮತ್ತೊಂದು ಬಸ್‌ನ ಸಿಬ್ಬಂದಿ, Video!

ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಲೋಕಭವನದಲ್ಲೇ ಸರಳ ಸಮಾರಂಭ; ಸಾರ್ವಜನಿಕರಿಗೆ ಪ್ರವೇಶ ಇಲ್ಲ

Video: TMC ನಾಯಕ Abhishek Banerjee ಮೇಲೆ ದಾಳಿ; ಕಲ್ಲು ತೂರಿ, ಮೊಟ್ಟೆ-ಚಪ್ಪಲಿ ಎಸೆತ! ಹೆಲ್ಮೆಟ್ ಧರಿಸಿ ಪಾರು

'ಈ ವಯಸ್ಸಲ್ಲಿ ನನಗೆ ಗಿಲ್ಲಿದಾಂಡು ಆಡೋಕೂ ಬರ್ತಿರಲಿಲ್ಲ: ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಅಮಿತಾಭ್

SCROLL FOR NEXT