ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು,‌ ಚಾಲಕ ಗಂಭೀರ

ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್‌ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್‌ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ರಾಜಾಜಿನಗರದ ಸರ್ಕಾರಿ ಸಾಬೂನು ಕಾರ್ಖಾನೆ ವೃತ್ತದ ಬಳಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟ ವ್ಯಕ್ತಿಯನ್ನು ಮಹಾಲಕ್ಷ್ಮೀಲೇಔಟ್‌ನ ಸಂತೋಷ್ (37) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರು ಚಾಲಕ ಉಮೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕೋಲಂಬೋ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ  ಸುಮಾರು 1.45ರ ವೇಳೆ ಮಹಾಲಕ್ಷ್ಮೀಲೇಔಟ್ ಕಡೆಗೆ ಸಾಗಲು ಸರ್ಕಾರಿ ಸಾಬೂನು ವೃತ್ತದ ಕಡೆಯಿಂದ ತೆರಳುತ್ತಿದ್ದಾಗ,
ಈ ವೇಳೆ ಅತಿ ವೇಗವಾಗಿ ಚಾಲನೆ ಮಾಡಿದ ಉಮೇಶ್ ಮುಂದಿನ ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಕಂಬಕ್ಕೆ ಅಪ್ಪಳಿಸಿದ್ದಾನೆ ಎನ್ನಲಾಗಿದೆ.
 
ಘಟನೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT