ಸಾಂದರ್ಭಿಕ ಚಿತ್ರ 
ರಾಜ್ಯ

ಗಂಗಾವತಿ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಪಹಣಿಯ 9ನೇ ಕಲಂನಲ್ಲಿ ತಿದ್ದುಪಡಿ ಮಾಡಲು ರೈತನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕರೊಬ್ಬರು ಹಣದ ಸಮೇತ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಗಂಗಾವತಿ: ಪಹಣಿಯ 9ನೇ ಕಲಂನಲ್ಲಿ ತಿದ್ದುಪಡಿ ಮಾಡಲು ರೈತನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕರೊಬ್ಬರು ಹಣದ ಸಮೇತ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ನಗರದ ಮಿನಿವಿಧಾನಸೌಧಲ್ಲಿ ರೈತ ಎಂಕೆ.ಖಾನ್ ಎಂಬುವವರಿಂದ ಆರು ಸಾವಿರ ರೂಪಾಯಿ ಲಂಚ ಪಡೆಯುವಾಗ ವೆಂಕಟಗಿರಿಯ ಕಂದಾಯ ನಿರೀಕ್ಷಕ ವಿಜಯಕುಮಾರ ಎಂಬುವವರು ಎಸಿಬಿ ಟ್ರಾಪ್ ಆಗಿದ್ದಾರೆ.

ಬಸವಪಟ್ಟಣ ಗ್ರಾಮದ ಸರ್ವೇ ನಂಬರ್ 76/6 ರಲ್ಲಿರುವ ರೈತನ ಪಹಣಿಯ 9ನೇ ಕಲಂನಲ್ಲಿ ಮೋಹಿನ್ ಪಾಷಾ ತಂದೆ ಮೈನುದ್ದೀನ್ ಪಾಷಾ ಎಂದು ಇರಬೇಕಿತ್ತು. ಆದರೆ ಮೋಹನ್ ಪಾಷಾ ತಂದೆ ಮೋಹನದ್ದೀನ್ ಎಂದಾಗಿದೆ. ಕಾನೂನು ಬದ್ಧವಾಗಿ ಬದಲಿಸಿಕೊಡುವಂತೆ ರೈತ ಕೇಳಿದ್ದಕ್ಕೆ ಅಧಿಕಾರಿ ಹತ್ತು ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ‌ ಮುಂಗಡ ಆರು ಸಾವಿರ ರೂಪಾಯಿ ಕೊಡುವಾಗ ಬಲೆ‌ಬೀಸಿದ ಎಸಿಬಿ ಅಧಿಕಾರಿಗಳು ಹಣದ ‌ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಎಸಿಬಿ ಪ್ರಭಾರಿ ಡಿವೈಎಸ್ಪಿ ಚಂದ್ರಕಾಂತ್ ಪೂಜಾರಿ ನೇತೃತ್ವದಲ್ಲಿ ದಾಳಿ ಮಾಡಿದರು. ಪಿಐಗಳಾದ ಬೀಳಗಿ ಸಿದ್ದಪ್ಪ, ಗುರುನಾಥ ಹಾಗೂ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT