ಸಂಗ್ರಹ ಚಿತ್ರ 
ರಾಜ್ಯ

ಗುಂಡ್ಲುಪೇಟೆಯಲ್ಲಿ ಉಗ್ರ ನೆಲೆ ಸ್ಥಾಪನೆಗೆ ಯತ್ನ: ಜಮೀನು ಖರೀದಿಸಿ ತರಬೇತಿ ಶಿಬಿರ ಸ್ಥಾಪಿಸಲು ಉಗ್ರರಿಂದ ಭಾರೀ ಯೋಜನೆ

ಇತ್ತೀಚೆಗೆ ಜಿಹಾದಿ ಗ್ಯಾಂಗ್ ವಿರುದ್ಧ ಸಿಸಿಬಿ ತನಿಖೆ ಚುರುಕುನಿಂದ ಸಾಗಿದ್ದಂತೆ ರೋಚಕ ಸಂಗತಿಗಳು ಹೊರಬರುತ್ತಿದ್ದು, ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ರಾಜ್ಯದ ಇಸಿಸ್ ಸಘಟನೆಯ ಹೊಸ ಸದಸ್ಯರಿಗೆ ತರಬೇತಿ ಶಿಬಿರ ಸ್ಥಾಪಿಸುವ ಸಲುವಾಗಿ ಜಮೀನು ಖರೀದಿಗೆ ಶಂಕಿತ ಉಗ್ರರು ಪ್ರಯತ್ನ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿಯೊಂದು ಇದೀಗ ಬಹಿರಂಗಗೊಂಡಿದೆ. 

ಬೆಂಗಳೂರು: ಇತ್ತೀಚೆಗೆ ಜಿಹಾದಿ ಗ್ಯಾಂಗ್ ವಿರುದ್ಧ ಸಿಸಿಬಿ ತನಿಖೆ ಚುರುಕುನಿಂದ ಸಾಗಿದ್ದಂತೆ ರೋಚಕ ಸಂಗತಿಗಳು ಹೊರಬರುತ್ತಿದ್ದು, ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ರಾಜ್ಯದ ಇಸಿಸ್ ಸಘಟನೆಯ ಹೊಸ ಸದಸ್ಯರಿಗೆ ತರಬೇತಿ ಶಿಬಿರ ಸ್ಥಾಪಿಸುವ ಸಲುವಾಗಿ ಜಮೀನು ಖರೀದಿಗೆ ಶಂಕಿತ ಉಗ್ರರು ಪ್ರಯತ್ನ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿಯೊಂದು ಇದೀಗ ಬಹಿರಂಗಗೊಂಡಿದೆ. 

ಈ ಕುರಿತು ಚಾಮರಾಜ ನಗರ ಎಸ್'ಪಿ ಆನಂದ್ ಕುಮಾರ್ ಅವರು ಮಾಹಿತಿ ನೀಡಿದ್ದು, ಅಲ್-ಹಿಂದ್ ಉಗ್ರರು ಸಡಕ್ತುಲ್ಲಾ ಹಾಗೂ ರೆಹ್ಮತ್ತೂಲ್ಲಾ ಎಂಬ ಇಬ್ಬರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು, ಭೂಮಿ ಖರೀದಿಗೆ ಸಹಾಯ ಮಾಡುವಂತೆ ಕೇಳಿದ್ದಾರೆಂದು ತಿಳಿಸಿದ್ದಾರೆ. 

ಇದೀಗ ಇಬ್ಬರನ್ನು ಪೊಲೀಸರು ವಿಚಾರಣೆಗಳಪಡಿಸಿದ್ದು, ಉಗ್ರರು ತಮ್ಮನ್ನು ಸಂಪರ್ಕಿಸಿದ್ದು ನಿಜ. ಆದರೆ, ನಾವು ಅವರನ್ನು ನೇರವಾಗಿ ಸಂಪರ್ಕಿಸಿಲ್ಲ. ಕೇವಲ ದೂರವಾಣಿ ಕರೆ ಮುಖಾಂತರವಷ್ಟೇ ನಮ್ಮ ನಡುವೆ ಮಾತುಕತೆ ನಡೆದಿತ್ತು ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಉಗ್ರರು ರಾಜ್ಯದ ಗಡಿ ಹಾಗೂ ಜನ ಸಂಚಾರವಿಲ್ಲದ ಅರಣ್ಯ ಪ್ರದೇಶದಲ್ಲಿ ಭೂಮಿ ಖರೀದಿ ಮಾಡಲು ಪ್ರಯತ್ನ ನಡೆಸಿದ್ದರು ಎಂದು ಹೇಳಲಾಗುತ್ತಿದೆ. 

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಅಪರಿಚ ವ್ಯಕ್ತಿಗಳಿಗೆ ಮನೆ ಹಾಗೂ ಭೂಮಿ ಕೊಡುವುದಕ್ಕೂ ಮುನ್ನ ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ ನೀಡಿದೆ. ವ್ಯಕ್ತಿಗಳ ಶಂಕಾಸ್ಪದ ಓಡಾಟಗಳು ಕಂಡು ಬಂದಿದ್ದೇ ಆದರೆ, ಜನರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!