ರಾಜ್ಯ

ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದವನನ್ನೇ ತಿವಿದ ಹೋರಿ; ಯುವಕ ಸಾವು, ಭೀಕರ ದೃಶ್ಯ!

Vishwanath S

ಹಾವೇರಿ: ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದ ಕಮಿಟಿಯಯ ಸದಸ್ಯನೇ ಹೋರಿ ತಿವಿತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ.

ಹಾವೇರಿಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದಲ್ಲಿ ಜಾನಪದ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಕಮಿಟಿ ಸದಸ್ಯ 34 ವರ್ಷದ ಶಿವಪ್ಪ ಮಲ್ಲೂರ ಮೃತ ಯುವಕ.

ಸಂಕ್ರಾಂತಿ ಹಬ್ಬದ ನಿಮಿತ್ತ ಕೋಡ ಗ್ರಾಮದಲ್ಲಿ ಶುಕ್ರವಾರ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಜನರನ್ನು ನಿಯಂತ್ರಿಸುತ್ತಿದ್ದಾಗ ಶಿವಪ್ಪ ಅವರ ಎದೆಗೆ ಹೋರಿ ತಿವಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಿರೇಕೆರೂರು ಆಸ್ಪತ್ರೆಗೆ ದಾಖಲಿಸಲಾಯಿತು. 

ಆದರೆ ಮಾರ್ಗ ಮಧ್ಯೆ ಶಿವಪ್ಪ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಶಿವಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

SCROLL FOR NEXT