ಡಾ.ರಾ ಸತ್ಯನಾರಾಯಣ 
ರಾಜ್ಯ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ ವಿಧಿವಶ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ (93) ಅವರು ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೈಸೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ (93) ಅವರು ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರಿಗೆ ಪುತ್ರ ರಾ.ಸ.ನಂದಕುಮಾರ್ ಹಾಗೂ ಪುತ್ರಿ ರೋಹಿಣಿ ಸುಬ್ಬರತ್ನಂ ಇದ್ದಾರೆ.

ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 1.30ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಸಂಜೆ 4.30ಕ್ಕೆ  ಅಂತ್ಯಸಂಸ್ಕಾರವು ಮೈಸೂರು– ಬೆಂಗಳೂರು ರಸ್ತೆಯ ಕೆಂಗಲ್ ಗ್ರಾಮದ ಬಳಿಯ ‘ರಸ ಋಷಿ’ ಆಶ್ರಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಯಚಾಮರಾಜ ಒಡೆಯರ್ ಅವರ ಆಸ್ಥಾನದಲ್ಲಿ ಸಂಗೀತ ವಿದ್ವಾಂಸರಾಗಿದ್ದ ರಾಮಯ್ಯ ಅವರ ಪುತ್ರರಾದ ಇವರು ಸಂತ ತ್ಯಾಗರಾಜ ಸಂಗೀತ ಪರಂಪರೆಯನ್ನು ಮುಂದುವರಿಸಿದವರು. ಇವರಿಗೆ ಕಾಶಿ ವಿಶ್ವವಿದ್ಯಾಲಯದಿಂದ ಮಹೋಪಧ್ಯಾಯ, ರಾಜ್ಯ ಸಂಗೀತ ವಿದ್ವಾನ್, ಸಂಗೀತ ನಾಟಕ ಅಕಾಡೆಮಿ ರತ್ನ, ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT