ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಇದೆ: ಸೂಲಿಬೆಲೆ 
ರಾಜ್ಯ

ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಇದೆ: ಸೂಲಿಬೆಲೆ

ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸುತ್ತಿದೆ ಎಂದು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. 

ಹಾವೇರಿ: ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸುತ್ತಿದೆ ಎಂದು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. 

ಡಿ.22 ರಂದು ಟೌನ್ ಹಾಲ್ ನಲ್ಲಿ ತಮ್ಮ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಹತ್ಯೆಗೆ ಎಸ್ ಡಿಪಿಐ ಸಂಘಟನೆ ಸಂಚು ರೂಪಿಸಿದ್ದರ ಕುರಿತು ಹಾವೇರಿಯ ವಿವೇಕಾನಂದ ಆಶ್ರಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

"ಇಂದು ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಡಿ.22 ರಂದು ಸಿಎಎ ಪರ ನಡೆದ ಕಾರ್ಯಕ್ರಮದಲ್ಲೇ ನನ್ನ ಮೇಲೆ ಕಲ್ಲು ಎಸೆದಿದ್ದರು ಅಂದು ನಡೆದ ಘಟನೆಯನ್ನ ಪೊಲೀಸ್ ಕಮಿಷನರ್ ಗೆ ತಿಳಿಸಿದ್ದೆ ಎಂದರು.  

ದೇಶವನ್ನು ಅಸ್ಥಿರಗೊಳಿಸುವ, ತುಂಡು, ತುಂಡು ಮಾಡುವ ಉದ್ದೇಶ ಹೊಂದಿರುವ ವ್ಯಕ್ತಿಗಳು ನನ್ನ ಕೊಲೆಗೆ ಯತ್ನಿಸುತ್ತಾರೆ ಎಂಬುದು ಆಶ್ಚರ್ಯಕರ. ಹಿಂದೂ ಸಮಾಜ ಪರವಾಗಿ ಹೋರಾಟ ಮಾಡಿದರೆ ಕೊಲೆ ಬೆದರಿಕೆಗಳು ಹೆಚ್ಚಾಗುತ್ತಿವೆ. ಇಂಥವರನ್ನು ಸರ್ಕಾರ ಸೂಕ್ತವಾಗಿ ವಿಚಾರಿಸಿಕೊಳ್ಳಬೇಕು. ಕರ್ನಾಟಕದಲ್ಲಿ ಐಸಿಸ್ ನಂತಹ ಉಗ್ರ ಸಂಘಟನೆ ನಿರ್ಮಾಣ ಮಾಡಬೇಕು ಎಂಬ ಕನಸು ಇಂತಹ ಕೊಲೆಗಾರರಿಗೆ ಇದೆ. ಆದರೆ ಇಂತಹ ಸಂಘಟನೆಗಳು ಹತ್ತಿಕ್ಕಲು ನಾವು ಅಡ್ಡಗಾಲು ಆಗಿದ್ದೇವೆ ಕೊನೆ ಉಸಿರು ಇರೋವರೆಗೂ ನಾನು ಹೇಗೆ ಸತ್ತರು ರಾಷ್ಟ್ರಕ್ಕಾಗಿ ಸಾಯ್ತೀನಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT