ತೀರ್ಥಯಾತ್ರೆಗೆ ಬಂದಿದ್ದ ಬಾಲಕ ಕಾಲುಜಾರಿ ಸರೋವರದ ಪಾಲು 
ರಾಜ್ಯ

ತೀರ್ಥಯಾತ್ರೆಗೆ ಬಂದಿದ್ದ ಬಾಲಕ ಕಾಲುಜಾರಿ ಸರೋವರದ ಪಾಲು

ಗಂಗಾವತಿ:ಅಜ್ಜ ಹಾಗೂ ಅಜ್ಜಿಯ ಜೊತೆಗೆ ತೀರ್ಥಯಾತ್ರೆಗೆ ಬಂದಿದ್ದ ಬಾಲಕನೊಬ್ಬ ಕಾಲುಜಾರಿ ಸರೋವರದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಆನೆಗೊಂದಿ ಸಮೀಪದ ಪಂಪಾಸರೋವರದಲ್ಲಿ ಶನಿವಾರ ಸಂಜೆ ಸಂಭವಿಸಿದೆ. 

ಮೃತ ಬಾಲಕನನ್ನು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಅಂಕಿತ್ ದಖಡ್ ತಂದೆ ಪರ್ವತಸಿಂಗ್ (10) ಎಂದು ಗುರುತಿಸಲಾಗಿದೆ. 

ತೀರ್ಥಯಾತ್ರೆಯ ಉದ್ದೇಶಕ್ಕೆ ತಾತ ಜಾನಕಿ ಲಾಲ್ ಹಾಗೂ ಅಜಿ ಕಾಂಚನಾ ಜೊತೆ ಈ ಬಾಲಕ ಬಂದಿದ್ದ. ಸರೋವರದ ಮೆಟ್ಟಿಲ ಮೇಲಿಳಿದು ನೀರು ತಲೆಯ ಮೇಲೆ ಪ್ರೋಕ್ಷಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಕಾಲು ಜಾರಿಗೆ ಎನ್ನಲಾಗಿದೆ. ಮುಳುಗು ತಜ್ಞರು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಹುಡಿಕಿದ ಬಳಿಕ ಬಾಲಕ ಶವ ಪತ್ತೆಯಾಗಿದೆ. ಶವ ಸಿಕ್ಕುತ್ತಿದ್ದಂತೆಯೇ ಅಜ್ಜ-ಅಜ್ಜಿಯರ ರೋಧನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ತಹಶೀಲ್ದಾರ್ ಚಂದ್ರಕಾಂತ್ ಭೇಟಿ ನೀಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT