ನಳಿನಿ 
ರಾಜ್ಯ

ಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಾದ ಮಂಡಿಸುವಂತೆ ವಕೀಲ ಸಂಘಕ್ಕೆ ಪ್ರಗತಿಪರ ಸಂಘಗಳ ಮನವಿ

ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿ ನಡೆದ ಪ್ರಿತಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಪರವಾಗಿ ವಾದ ಮಂಡಿಸುವಂತೆ ವಕೀಲ ಸಂಘಕ್ಕೆ ಮೈಸೂರು ನಗರ ಆಧಾರಿತ ಪ್ರಗತಿಪರ ಸಂಸ್ಥೆಗಳು ಮನವಿ ಮಾಡಿಕೊಂಡಿವೆ. 

ಮೈಸೂರು: ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿ ನಡೆದ ಪ್ರಿತಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಪರವಾಗಿ ವಾದ ಮಂಡಿಸುವಂತೆ ವಕೀಲ ಸಂಘಕ್ಕೆ ಮೈಸೂರು ನಗರ ಆಧಾರಿತ ಪ್ರಗತಿಪರ ಸಂಸ್ಥೆಗಳು ಮನವಿ ಮಾಡಿಕೊಂಡಿವೆ. 

ನಳಿನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದು, ಈಗಾಗಲೇ ಅವರಿಗೆ ಜಾಮೀನು ಕೂಡ ದೊರಕಿದೆ. ಸಿಆರ್'ಪಿಸಿ ಮತ್ತು ಸಂವಿಧಾನವು ಪ್ರತಿಯೊಬ್ಬರೂ ತಮ್ಮ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಲು ವಕೀಲರನ್ನು ಹೊಂದುವ ಹಕ್ಕನ್ನು ನೀಡುತ್ತದೆ. ನಳಿನಿಗೂ ಆ ಹಕ್ಕು ಹೊತ್ತುವ ಹಕ್ಕಿದೆ ಎಂದು ಪ್ರಗತಿಪರ ಸಂಸ್ಥೆಗಳು ತಿಳಿಸಿವೆ. 

ನಳಿನಿಯವರಿಗೆ ಕ್ರಿಮಿನಲ್ ಪಟ್ಟ ಕಟ್ಟಿರುವ ಹಿನ್ನೆಲೆಯಲ್ಲಿ ಚಿಂತಕರಾದ ಪ. ಮಲ್ಲೇಶ್, ಪ್ರೊ.ಮಹೇಶ್ ಚಂದ್ರಗುರು, ಪ್ರೊ ಶಬೀರ್ ಮೊಹ್ದ್ ಮುಸ್ತಾಫಾ, ಕೆಎಸ್. ಶಿವರಾಮ್ ಮತ್ತು ಇತರರು ವಿಷಾದ ವ್ಯಕ್ತಪಡಿಸಿದ್ದಾರೆ. 

ನಳಿನಿ ಎಂಬ ದಲಿತ ಮಹಿಳೆ ವಿರುದ್ಧ ದೇಶದ್ರೋಹ ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಹೀಗಾಗಿ ಅವರಿಗೆ ಕಾನೂನು ಬೆಂಬಲದ ಅವಶ್ಯಕತೆಯಿದೆ. ಹೀಗಾಗಿ ಅವರಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT