ಸಂಗ್ರಹ ಚಿತ್ರ 
ರಾಜ್ಯ

ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ; ದಾವೋಸ್‌ನಿಂದ ಬಂದ ಬಳಿಕ ವಿಸ್ತರಣೆ ಖಚಿತ: ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಅರ್ಧ ಗಂಟೆಗಳ ಕಾಲ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದ್ದು, ಅಧ್ಯಕ್ಷರಿಂದ ಉತ್ತಮ ಸ್ಪಂದನೆ ದೊರೆತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಅರ್ಧ ಗಂಟೆಗಳ ಕಾಲ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದ್ದು, ಅಧ್ಯಕ್ಷರಿಂದ ಉತ್ತಮ ಸ್ಪಂದನೆ ದೊರೆತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ದಾವೋಸ್‌ಗೆ ತೆರಳುವ ಮುನ್ನ ನಗರದ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ದಾವೋಸ್ ನಿಂದ ಬರುತ್ತಿದ್ದಂತೆ ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಮಂತ್ರಿಮಂಡಲ ವಿಸ್ತರಣೆಗೆ ಯಾವುದೇ ಅಡ್ಡಿ ಆತಂಕ ಇಲ್ಲ ಎಂದರು.

ಈ ಸಂಬಂಧ ಅಮಿತ್ ಶಾ ಅವರೊಂದಿಗೆ ಎರಡು ಬಾರಿ ಮಾತನಾಡಿದ್ದೇನೆ. ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆ ಇಲ್ಲ. ದಾವೋಸ್ ನಿಂದ ಬಂದ ನಂತರ ಮತ್ತೆ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನು ಮತ್ತೊಮ್ಮೆ ಔಪಚಾರಿಕವಾಗಿ ಭೇಟಿ ಆಗಲಿದ್ದೇನೆ. ನಾಲ್ಕು ದಿನಗಳ ಕಾಲ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ಕಡೆ ಪ್ರಯಾಣ ಬೆಳೆಸಿದ್ದು, ರಾಜ್ಯಕ್ಕೆ ಹೂಡಿಕೆ ತರಲು ವಿಶೇಷವಾದ ಪ್ರಯತ್ನ ನಡೆಸಿ ಹೂಡಿಕೆದಾರರು ಹಾಗು ಕೈಗಾರಿಕೋದ್ಯಮಿಗಳ ಜೊತೆ ಸಂವಾದ ನಡೆಸುವುದಾಗಿ ಹೇಳಿದರು.

ಇನ್ನು ಸಿಎಎ ಜಾಗೃತಿ ಸಮಾವೇಶಕ್ಕಾಗಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದು, ಇದೇ ವೇಳೆ ನಿರೀಕ್ಷೆಯಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆಗೆ ನನ್ನ ಅಭ್ಯಂತರವಿಲ್ಲ. ಸಂಪುಟ ವಿಸ್ತರಣೆ ಮಾಡಿ. ಗೆದ್ದ ಎಲ್ಲ ಶಾಸಕರನ್ನೂ ಮಂತ್ರಿ ಮಾಡಿ. ದಾವೋಸ್​ಗೆ ಹೋಗಿ ಬಂದ ಬಳಿಕ ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸಿಎಂ ಬಿಎಸ್​ವೈಗೆ ಅಮಿತ್ ಶಾ ಅಭಯ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT