ಮುತ್ತಪ್ಪ ರೈ 
ರಾಜ್ಯ

ಮಾರಣಾಂತಿಕ ಕಾಯಿಲೆ: ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ - ಮುತ್ತಪ್ಪ ರೈ

ಭೂಗತ ಜಗತ್ತಿನ ಕರಾಳ ದುನಿಯಾದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸುತ್ತಿದ್ದ ಮುತ್ತಪ್ಪ ರೈ ಇದೀಗ ತಾವು ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಭೂಗತ ಜಗತ್ತಿನ ಕರಾಳ ದುನಿಯಾದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸುತ್ತಿದ್ದ ಮುತ್ತಪ್ಪ ರೈ ಇದೀಗ ತಾವು ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ. 

ತಮ್ಮ ಅನಾರೋಗ್ಯದ ಕುರಿತು ಎದ್ದಿರುವ ಅನುಮಾನಗಳ ಬಗ್ಗೆ ಸೋಮವಾರ  ಬಿಡದಿ ಬಳಿಯ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವರ್ಷದ  ಹಿಂದೆ ಕುಕ್ಕೆಗೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು. ನಂತರದಲ್ಲಿ  ಪರೀಕ್ಷೆ ಮಾಡಿದಾಗ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ನಂತರ ದೆಹಲಿಯ  ಮ್ಯಾಕ್ಸ್, ಚೆನ್ಮೈನ ಅಪೋಲೊ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ  ಪಡೆದಿದ್ದೇನೆ. ಶೇ.90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದರು. 

ಆದರೆ ನಂತರದಲ್ಲಿ  ಮಿದುಳಿಗೆ ಕ್ಯಾನ್ಸರ್ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು  ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ ಆಗಿದ್ದೇನೆ. ನನಗೀಗ 68 ವರ್ಷ. ಐದು ಗುಂಡು  ಬಿದ್ದರೂ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್‌ನಿಂದ ಬದುಕುತ್ತಿದ್ದೇನೆ.  ಸಮಾಜ ಸೇವೆ ಮುಂದುವರಿಸುತ್ತೇನೆ ಎಂದು ತಿಳಿಸಿದರು.

‘ವರ್ಷಕ್ಕೆ 20 ರಿಂದ 30 ಕೋಟಿ ರೂ. ತೆರಿಗೆ ಕಟ್ಟುತ್ತಿದ್ದೇನೆ. ಆಸ್ತಿ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ  ತಿಳಿಸಿದ್ದೇನೆ. ಕಳೆದ 15-20 ವರ್ಷಗಳಿಂದ ನನ್ನ ಜೊತೆಗಿರುವವರಿಗೆ ಒಂದೊಂದು ನಿವೇಶನ ಕೊಡುವಂತೆ ತಿಳಿಸಿದ್ದೇನೆ ಎಂದು ವಿವರಿಸಿದರು.

ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮುತ್ತಪ್ಪ ರೈ ರಾಜೀನಾಮೆ
ಕ್ಯಾನ್ಸರ್ ರೋಗದಿಂದ ಬಳಲುತ್ತಿರುವುದರಿಂದ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದೇನೆ. ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು  ನೇಮಿಸಿದ್ದೇನೆ ಎಂದು ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT