ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ: ಟೈಮರ್ ಜೊತೆಗೆ ಬಾಂಬ್ ಸಂಪರ್ಕ ಕೊಟ್ಟಿರಲಿಲ್ಲ ಉಗ್ರರು 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ: ಟೈಮರ್ ಜೊತೆಗೆ ಬಾಂಬ್ ಸಂಪರ್ಕ ಕೊಟ್ಟಿರಲಿಲ್ಲ ಉಗ್ರರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಸಜೀವ ಬಾಂಬ್ ಜೊತೆಗೆ ಉಗ್ರರು ಟೈಮರ್ ಸಂಪರ್ಕ ಕಲ್ಪಿಸಿರಲಿಲ್ಲ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಸಜೀವ ಬಾಂಬ್ ಜೊತೆಗೆ ಉಗ್ರರು ಟೈಮರ್ ಸಂಪರ್ಕ ಕಲ್ಪಿಸಿರಲಿಲ್ಲ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್'ಗೂ, ಟೈಮರ್'ಗೂ ಸಂಪರ್ಕ ಕಲ್ಪಿಸಿರಲಾಗಿರಲಿಲ್ಲ. ಬಾಂಬ್ ನಲ್ಲಿದ್ದ ಟೈಮರ್ ಆಫ್ ಆಗಿತ್ತು. ಒಂದು ವೇಳೆ ಉಗ್ರರು ಟೈಮರ್ ಗೆ ಬಾಂಬ್ ಕನೆಕ್ಷನ್ ನೀಡಿದ್ದಿದ್ದರೆ, ಅದನ್ನು ಆತ ತನಗೆ ಬೇಕಾದ ಸಮಯದಲ್ಲಿ ಸ್ಫೋಟಿಸಲು ಅವಕಾಶವಿರುತ್ತಿತ್ತು. ಆದರೆ, ಸ್ಫೋಟ ಸಂಭವಿಸದೆ ಇದ್ದುದರ ಹಿಂದೆ ಕೇವಲ ಭಯದ ವಾತಾವರಣ ಮೂಡಿಸುವ ಉದ್ದೇಶ ಮಾತ್ರವೇ ಇತ್ತೇ ಎಂಬ ಶಂಕೆಗಳು ಇದೀಗ ವ್ಯಕ್ತವಾಗುತ್ತಿವೆ. 

ಮತ್ತೊಂದೆಡೆ ಆ ದುಷ್ಕರ್ಮಿ ಬಾಂಬ್ ಮತ್ತು ಟೈಮರ್ ನಡುವೆ ಸಂಪರ್ಕ ಕಲ್ಪಿಸಲು ಮರೆತು ಹೋಗಿರಬಹುದು ಅಥವಾ ಕಲ್ಪಿಸಿದ ಸಂಪರ್ಕ ಆತನ ಪ್ರಯಾಣ ಅವಧಿಯಲ್ಲಿ ಕಡಿತಗೊಂಡಿರಬಹುದು ಎಂದೂ ಕೂಡ ವಿಶ್ಲೇಷಿಸಲಾಗುತ್ತಿದೆ. ದುಷ್ಕರ್ಮಿ ಬಸ್ಸಿನಲ್ಲಿ ಬಂದಿದ್ದ. ಬಜ್ಪೆ ಕಡೆ ತೆರಳುವ ಬಸ್ಸು ಸದಾ ಜನರಿಂದ ತುಂಬಿರುತ್ತದೆ. ಈ ನಡುವೆ ತಿಕ್ಕಾಟದಲ್ಲಿ ಬ್ಯಾಗ್ ನಲ್ಲಿಟ್ಟ ಬಾಂಬ್'ನ ಸಂಪರ್ಕ ವ್ಯವಸ್ಥೆ ಕಡಿತಗೊಂಡಿರಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!