ರಾಜ್ಯ

ಮಂಗಳೂರು: ಬೀಚ್ ನಲ್ಲಿ ಆಟವಾಡುತ್ತ ನೀರು ಪಾಲಾಗಿದ್ದ ನಾಲ್ವರ ರಕ್ಷಣೆ, ಯುವತಿ ಗಂಭೀರ

Lingaraj Badiger

ಮಂಗಳೂರು: ಇಲ್ಲಿನ ಸುರತ್ಕಲ್ ಸಮೀಪದ ಎನ್ ಐಟಿಕೆ ಬೀಚಲ್ಲಿ ನೀರಾಟವಾಡುತ್ತಿದ್ದ ಸಂದರ್ಭದಲ್ಲಿ ನೀರು ಪಾಲಾಗಿದ್ದ ನಾಲ್ವರನ್ನು ಮೀನುಗಾರರು ರಕ್ಷಿಸಿದ್ದಾರೆ.

ದೋಣಿಯಲ್ಲಿದ್ದ ಮೀನುಗಾರರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದು, ಅಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಈ ಪೈಕಿ ಒಬ್ಬ ಯುವತಿ ಗಂಭೀರ ಗಾಯಗೊಂಡಿದ್ದಾಳೆ.

ಆಂಧ್ರ ಮೂಲದ ವಿದ್ಯಾರ್ಥಿಗಳ ತಂಡ ವಿಹಾರಕ್ಕೆ ಆಗಮಿಸಿದ್ದು ಈ ವೇಳೆ ಸಮುದ್ರದ ಆಳದ ಅರಿವಿಲ್ಲದೆ ಇಳಿದಿದ್ದು ಅಲೆಗಳ ಹೊಡೆತಕ್ಕೆ ಸಿಲುಕಿ ನಾಲ್ವರು ಕೊಚ್ಚಿಹೋಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು.

SCROLL FOR NEXT