ಯಾದಗಿರಿ ಬಸ್ ನಿಲ್ದಾಣ 
ರಾಜ್ಯ

ಯಾದಗಿರಿ: ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ, ಜನರ ಆತಂಕ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದ್ದ ಬ್ಯಾಗ್ ಪತ್ತೆಯಾದ ಬೆನ್ನಲ್ಲೇ ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲ ಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. 

ಯಾದಗಿರಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದ್ದ ಬ್ಯಾಗ್ ಪತ್ತೆಯಾದ ಬೆನ್ನಲ್ಲೇ ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲ ಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. 

ಅಪರಿಚಿತ ವ್ಯಕ್ತಿಯೋರ್ವ ಬ್ಯಾಗ್ ಬಿಟ್ಟು ಹೋಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಹಾಗೂ ಶ್ವಾನದಳದಿಂದ ಬ್ಯಾಗ್ ತಪಾಸಣೆ ನಡೆಸಿದರು. ಬ್ಯಾಗ್ ನಲ್ಲಿ ಬಟ್ಟೆ, ಹಣ ಪತ್ತೆಯಾಗಿದ್ದು, ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಪ್ರಯಾಣಿಕರೊಬ್ಬರು ಬ್ಯಾಗ್ ಬಿಟ್ಟು ಹೋಗಿದ್ದರು ಎಂದು ನಂತರ ಮಾಹಿತಿ ದೊರೆತಿದೆ. 

ಇದಾದ ಕೆಲ ಹೊತ್ತಿನಲ್ಲಿ ನಗರದ ಅಜೀಜ್ ಕಾಲೋನಿಯ ಸನಾ ಮಸೀದಿ ಪಕ್ಕದಲ್ಲಿ ಮತ್ತೊಂದು ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿ ಅಲ್ಲಿಯೂ ಬ್ಯಾಗ್ ಪರಿಶೀಲನೆ ನಡೆಸಲಾಯಿತು. ಬ್ಯಾಗ್ ನಲ್ಲಿ ನೆಹರು ಶಾಲೆಯ ವಿದ್ಯಾರ್ಥಿ ಶೇಕ್ ಇಮ್ರಾನ್ ಹೆಸರಿನ ಐಡಿ ಕಾರ್ಡ್, ಪುಸ್ತಕ ಪತ್ತೆಯಾಗಿತ್ತು. 

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಯಾರೂ ಆತಂಕಪಡುವ ಅಗತ್ಯವಿಲ್ಲ. ಶಂಕಾಸ್ಪದ ವ್ಯಕ್ತಿ ಅಥವಾ ವಸ್ತು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT