ದಾವೊಸ್ ನಲ್ಲಿ ಉದ್ಯಮಿಗಳ ಜೊತೆ ಸಿಎಂ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ 
ರಾಜ್ಯ

ದಾವೊಸ್: ಕೃಷಿ ಬೆಳವಣಿಗೆ, ಗ್ರಾಮೀಣಾಭಿವೃದ್ಧಿಗೆ ವಿಶ್ವ ಆರ್ಥಿಕ ಸಮಾವೇಶದಲ್ಲಿ ಒತ್ತು ನೀಡಿದ ಸಿಎಂ ಯಡಿಯೂರಪ್ಪ 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಿಡ್ಜರ್ಲ್ಯಾಂಡ್ ನ ದಾವೊಸ್ ನಲ್ಲಿ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಿಡ್ಜರ್ಲ್ಯಾಂಡ್ ನ ದಾವೊಸ್ ನಲ್ಲಿ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.


ನಿನ್ನೆ ಮಂಗಳವಾರ ಸಮಾವೇಶದ ಒಂದನೇ ದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಪ್ರಗತಿ ಬಗ್ಗೆ ಒತ್ತು ನೀಡಿದರು. ರೈತರ ಆಸಕ್ತಿಗಳನ್ನು ನೋಡಿಕೊಂಡು ಮತ್ತು ಇನ್ನಷ್ಟು ಉದ್ಯೋಗ ಸೃಷ್ಟಿಗೆ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಕರೆ ನೀಡಿದರು. ರೈತರ ಆರ್ಥಿಕ ಬೆಳವಣಿಗೆ ಮತ್ತು ಗ್ರಾಮೀಣಾಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಹೂಡಿಕೆದಾರರಿಗೆ ಕರೆ ನೀಡಿದರು. ಇದರಿಂದ ರೈತರ ಆತ್ಮಹತ್ಯೆ ತಡೆಗಟ್ಟಬಹುದು ಎಂದಿದ್ದಾರೆ.


ನಮ್ಮ ರೈತರು ಮತ್ತು ಗ್ರಾಮೀಣದ ಯುವಕರ ಬಗ್ಗೆ ಗಮನ ಹರಿಸುವ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳ ಬಗ್ಗೆ ಜಾಗ್ರತೆ ವಹಿಸಲು ನಾನು ಸಿದ್ದನಿದ್ದೇನೆ. ನಗರಗಳ ಅಭಿವೃದ್ಧಿ ಯೋಜನೆಗಳು ಮತ್ತು ಆಹಾರ ಸಂಸ್ಕರಣೆ ಘಟಕಗಳಲ್ಲಿ ಭಾಗಿಯಾಗಿರುವ 2 ಸಾವಿರ ವಾಟ್ ಕಂಪೆನಿ ಕರ್ನಾಟಕದಲ್ಲಿ ಆಹಾರ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆ ಮಾಡಲು ಮುಂದಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT