ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಲಾರಿ ಹರಿದು ಮೂವರು ಸಾವು 

ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಬೀದರ್ : ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ವಾಹನದ ಟೈರ್ ಜೋಡಿಸುತ್ತಿದ್ದ ವೇಳೆ ಲಾರಿ ಹರಿದು‌ ಮೂವರು‌ ಮೃತಪಟ್ಟಿದ್ದಾರೆ. ಮೃತರನ್ನು ಅನ್ಸರ್ ಬಸಂತಪೂರ್ (32), ವಿಜಯ ಕುಮಾರ್ ಬಸಂತಪೂರ್ (24), ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ.

ಈ ಮೂವರು ಗೂಡ್ಸ್  ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಮನ್ನಾಎಖೇಳಿ ಕಡೆಗೆ ಹೊರಟಿದ್ದರು. ಈ ವೇಳೆ  ವಾಹನದ ಟೈರ್ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಪ್ಲೈಓವರ್ ಮೇಲೆ ಮತ್ತೊಂದು ಟೈರ್ ಜೋಡಣೆ ಮಾಡುತ್ತಿದ್ದರು‌. ಈ ವೇಳೆ ಲಾರಿ ಹರಿದು ಘಟನೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಬೀದರ್​ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್​​​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT