ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಲಾರಿ ಹರಿದು ಮೂವರು ಸಾವು 

ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಬೀದರ್ : ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ವಾಹನದ ಟೈರ್ ಜೋಡಿಸುತ್ತಿದ್ದ ವೇಳೆ ಲಾರಿ ಹರಿದು‌ ಮೂವರು‌ ಮೃತಪಟ್ಟಿದ್ದಾರೆ. ಮೃತರನ್ನು ಅನ್ಸರ್ ಬಸಂತಪೂರ್ (32), ವಿಜಯ ಕುಮಾರ್ ಬಸಂತಪೂರ್ (24), ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ.

ಈ ಮೂವರು ಗೂಡ್ಸ್  ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಮನ್ನಾಎಖೇಳಿ ಕಡೆಗೆ ಹೊರಟಿದ್ದರು. ಈ ವೇಳೆ  ವಾಹನದ ಟೈರ್ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಪ್ಲೈಓವರ್ ಮೇಲೆ ಮತ್ತೊಂದು ಟೈರ್ ಜೋಡಣೆ ಮಾಡುತ್ತಿದ್ದರು‌. ಈ ವೇಳೆ ಲಾರಿ ಹರಿದು ಘಟನೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಬೀದರ್​ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್​​​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT