ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ಜನವರಿಯಲ್ಲಿ 40 ಎಚ್ 1 ಎನ್ 1 ಪ್ರಕರಣಗಳು ಪತ್ತೆ 

ರಾಜ್ಯದಲ್ಲಿ ಮತ್ತೆ ಎಚ್ 1ಎನ್ 1 ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಜನವರಿ ತಿಂಗಳ ಮೊದಲ 20 ದಿನಗಳಲ್ಲಿ ರಾಜ್ಯಾದ್ಯಂತ 40 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಚ್ 1ಎನ್ 1 ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಜನವರಿ ತಿಂಗಳ ಮೊದಲ 20 ದಿನಗಳಲ್ಲಿ ರಾಜ್ಯಾದ್ಯಂತ 40 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿವೆ. 

ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲೇ 22 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 2,  ಉಡುಪಿಯಲ್ಲಿ ಏಳು, ಶಿವಮೊಗ್ಗದಲ್ಲಿ 1 ಹಾಗೂ ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ.

ಈ ತಿಂಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.  ಕಳೆದ ವರ್ಷ 2, 030 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿ 87 ಜನರು ಸಾವನ್ನಪ್ಪಿದ್ದರು. 

ಈ ವರ್ಷದ ಮೊದಲ 20 ದಿನಗಳಲ್ಲಿ ರಾಜ್ಯದಾದ್ಯಂತ ಸುಮಾರು 40 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ. ಇದರಲ್ಲಿ ಅರ್ಧದಷ್ಟು ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ. 
 
ಚಳಿಗಾಲದ ಮಧ್ಯ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಎಚ್ 1 ಎನ್ 1 ಸೋಂಕು ಪತ್ತೆಯಾಗುವುದನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ, ಚಳಿಗಾಲ ಮುಗಿದಿದ್ದರೂ ಜನವರಿಯಲ್ಲಿ ಸೋಂಕಿತರ ಬಗ್ಗೆ ವರದಿಯಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಮೈಸೂರು ಹೇಳಿದ್ದಾರೆ.

ಎಚ್ 1ಎನ್ 1 ರೋಗ ಹರಡಿರುವ ವ್ಯಕ್ತಿಗೆ ಪ್ರಮುಖವಾಗಿ ತೀವ್ರ ಜ್ವರ, ನೆಗಡಿ, ಗಂಟಲು ಕೆರೆತ, ಅತಿಯಾದ ಮೈ ಕೈ ನೋವು, ಕೆಮ್ಮು ಮತ್ತು ಕಫ ಬರುವುದೊಂದಿಗೆ ಅತಿಯಾಗಿ ವಾಂತಿ ಬೇಧಿ ಉಂಟಾಗುತ್ತಿರುತ್ತದೆ. ಉಸಿರಾಟದ ತೊಂದರೆಗಳು ಲಕ್ಷಣಗಳು ಕಂಡುಬರುತ್ತವೆ. ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೆ ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಅವರು ಸಲಹೆ ನೀಡುತ್ತಾರೆ. 

ಕೆಮ್ಮುವುದು, ಸೀನುವಿಕೆ, ಮಾತನಾಡುವುದು ಅಥವಾ ಸೋಂಕಿತ ವ್ಯಕ್ತಿಯು ಬಳಸುವ ವಸ್ತುಗಳನ್ನು ಸ್ಪರ್ಶಿಸುವ ಮೂಲಕ ಎಚ್ 1 ಎನ್ 1 ಹರಡುತ್ತದೆ. ಲಸಿಕೆಗಳಿವೆ ಆದರೆ ಅವು ದೀರ್ಘಕಾಲದವರೆಗೆ ರೋಗನಿರೋಧಕ ಶಕ್ತಿಯನ್ನು ಒದಗಿಸುವುದಿಲ್ಲ ಮತ್ತು ವೈರಸ್ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುವುದರಿಂದ ಪ್ರತಿ ವರ್ಷ ಹೊಸ ಉಪ-ರೀತಿಯ ಲಸಿಕೆಗಳು ಹೊರಬರುತ್ತವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾದೇಶಿಕ ನಿರ್ದೇಶಕ ಡಾ.ರವಿಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT