ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ಜನವರಿಯಲ್ಲಿ 40 ಎಚ್ 1 ಎನ್ 1 ಪ್ರಕರಣಗಳು ಪತ್ತೆ 

ರಾಜ್ಯದಲ್ಲಿ ಮತ್ತೆ ಎಚ್ 1ಎನ್ 1 ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಜನವರಿ ತಿಂಗಳ ಮೊದಲ 20 ದಿನಗಳಲ್ಲಿ ರಾಜ್ಯಾದ್ಯಂತ 40 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಚ್ 1ಎನ್ 1 ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಜನವರಿ ತಿಂಗಳ ಮೊದಲ 20 ದಿನಗಳಲ್ಲಿ ರಾಜ್ಯಾದ್ಯಂತ 40 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿವೆ. 

ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲೇ 22 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 2,  ಉಡುಪಿಯಲ್ಲಿ ಏಳು, ಶಿವಮೊಗ್ಗದಲ್ಲಿ 1 ಹಾಗೂ ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ.

ಈ ತಿಂಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.  ಕಳೆದ ವರ್ಷ 2, 030 ಎಚ್ 1ಎನ್ 1 ಪ್ರಕರಣಗಳು ಪತ್ತೆಯಾಗಿ 87 ಜನರು ಸಾವನ್ನಪ್ಪಿದ್ದರು. 

ಈ ವರ್ಷದ ಮೊದಲ 20 ದಿನಗಳಲ್ಲಿ ರಾಜ್ಯದಾದ್ಯಂತ ಸುಮಾರು 40 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ. ಇದರಲ್ಲಿ ಅರ್ಧದಷ್ಟು ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ. 
 
ಚಳಿಗಾಲದ ಮಧ್ಯ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಎಚ್ 1 ಎನ್ 1 ಸೋಂಕು ಪತ್ತೆಯಾಗುವುದನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ, ಚಳಿಗಾಲ ಮುಗಿದಿದ್ದರೂ ಜನವರಿಯಲ್ಲಿ ಸೋಂಕಿತರ ಬಗ್ಗೆ ವರದಿಯಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಮೈಸೂರು ಹೇಳಿದ್ದಾರೆ.

ಎಚ್ 1ಎನ್ 1 ರೋಗ ಹರಡಿರುವ ವ್ಯಕ್ತಿಗೆ ಪ್ರಮುಖವಾಗಿ ತೀವ್ರ ಜ್ವರ, ನೆಗಡಿ, ಗಂಟಲು ಕೆರೆತ, ಅತಿಯಾದ ಮೈ ಕೈ ನೋವು, ಕೆಮ್ಮು ಮತ್ತು ಕಫ ಬರುವುದೊಂದಿಗೆ ಅತಿಯಾಗಿ ವಾಂತಿ ಬೇಧಿ ಉಂಟಾಗುತ್ತಿರುತ್ತದೆ. ಉಸಿರಾಟದ ತೊಂದರೆಗಳು ಲಕ್ಷಣಗಳು ಕಂಡುಬರುತ್ತವೆ. ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೆ ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಅವರು ಸಲಹೆ ನೀಡುತ್ತಾರೆ. 

ಕೆಮ್ಮುವುದು, ಸೀನುವಿಕೆ, ಮಾತನಾಡುವುದು ಅಥವಾ ಸೋಂಕಿತ ವ್ಯಕ್ತಿಯು ಬಳಸುವ ವಸ್ತುಗಳನ್ನು ಸ್ಪರ್ಶಿಸುವ ಮೂಲಕ ಎಚ್ 1 ಎನ್ 1 ಹರಡುತ್ತದೆ. ಲಸಿಕೆಗಳಿವೆ ಆದರೆ ಅವು ದೀರ್ಘಕಾಲದವರೆಗೆ ರೋಗನಿರೋಧಕ ಶಕ್ತಿಯನ್ನು ಒದಗಿಸುವುದಿಲ್ಲ ಮತ್ತು ವೈರಸ್ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುವುದರಿಂದ ಪ್ರತಿ ವರ್ಷ ಹೊಸ ಉಪ-ರೀತಿಯ ಲಸಿಕೆಗಳು ಹೊರಬರುತ್ತವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾದೇಶಿಕ ನಿರ್ದೇಶಕ ಡಾ.ರವಿಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT