ಹ್ಯಾರಿಸ್ ಪುತ್ರ ನಲಪಾಡ್ 
ರಾಜ್ಯ

ನಿಗೂಢ ಸ್ಫೋಟದಲ್ಲಿ ಶಾಸಕ ಹ್ಯಾರಿಸ್'ಗೆ ಗಾಯ: ಉದ್ದೇಶಪೂರ್ವಕ ದಾಳಿ ಎಂದ ಪುತ್ರ ನಲಪಾಡ್

ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಬೆಂಗಳೂರು: ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ತಂದೆಯನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿ ಕಾರ್ಯಕ್ರಮದಲ್ಲಿ ಕೆಲವು ದುಷ್ಕೃತ್ಯ ಎಸಗಿದ್ದಾರೆ. ಇದು ಖಂಡಿತವಾಗಿಯೂ ಪಟಾಕಿಯಿಂದಾಗಿ ಸಂಭವಿಸಿದ ಸ್ಫೋಟವಲ್ಲ. ಕಚ್ಚಾ ಬಾಂಬ್ ಬಳಕೆಯಾಗಿರುವ ಅನುಮಾನವಿದೆ ಎಂದು ಆಸೋಪಿಸಿದ್ದಾರೆ. 

ನಮ್ಮ ಕ್ಷೇತ್ರದಲ್ಲಿ ಯಾರೂ ವೈರಿಗಳಿಲ್ಲ. ದೇವರ ದಯೆಯಿಂದ ಪ್ರಾಣಾಪಾಯದಿಂದ ತಂದೆ ಪಾರಾಗಿದ್ದಾರೆ. ಅವರಿಗೆ ಕಾಲಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 

ಕಾರ್ಯಕ್ರಮಕ್ಕೆ ನಾನು 5 ನಿಮಿಷ ತಡವಾಗಿ ತೆರಳಿದ್ದೆ. ಅಷ್ಟರಲ್ಲಾಗಲೇ ಘಟನೆ ನಡೆದು ಹೋಗಿತ್ತು. ಕೂಡಲೇ ಆಸ್ಪತ್ರೆಗೆ ಧಾವಿಸಿದೆ. ಇತರೆ ಮೂವರೂ ಕೂಡ ಸುರಕ್ಷಿತವಾಗಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

West Asia Crisis: ಮುಳುಗಿದ D-Street; 13.5 ಲಕ್ಷ ಕೋಟಿ ನಿರ್ನಾಮ!

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್‌ ನಾಮನಿರ್ದೇಶನಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ!

ಭಾರತ vs ಪಾಕಿಸ್ತಾನ ಅಲ್ಲ, ಇನ್ಮುಂದೆ Afghanistan vs Pakistan: ನೆರೆ ರಾಷ್ಟ್ರದ Rivalry ಬಿಚ್ಚಿಟ್ಟ ಆಫ್ಘನ್ ಆಟಗಾರ!

SCROLL FOR NEXT