ಹ್ಯಾರಿಸ್ ಪುತ್ರ ನಲಪಾಡ್ 
ರಾಜ್ಯ

ನಿಗೂಢ ಸ್ಫೋಟದಲ್ಲಿ ಶಾಸಕ ಹ್ಯಾರಿಸ್'ಗೆ ಗಾಯ: ಉದ್ದೇಶಪೂರ್ವಕ ದಾಳಿ ಎಂದ ಪುತ್ರ ನಲಪಾಡ್

ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಬೆಂಗಳೂರು: ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ತಂದೆಯನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿ ಕಾರ್ಯಕ್ರಮದಲ್ಲಿ ಕೆಲವು ದುಷ್ಕೃತ್ಯ ಎಸಗಿದ್ದಾರೆ. ಇದು ಖಂಡಿತವಾಗಿಯೂ ಪಟಾಕಿಯಿಂದಾಗಿ ಸಂಭವಿಸಿದ ಸ್ಫೋಟವಲ್ಲ. ಕಚ್ಚಾ ಬಾಂಬ್ ಬಳಕೆಯಾಗಿರುವ ಅನುಮಾನವಿದೆ ಎಂದು ಆಸೋಪಿಸಿದ್ದಾರೆ. 

ನಮ್ಮ ಕ್ಷೇತ್ರದಲ್ಲಿ ಯಾರೂ ವೈರಿಗಳಿಲ್ಲ. ದೇವರ ದಯೆಯಿಂದ ಪ್ರಾಣಾಪಾಯದಿಂದ ತಂದೆ ಪಾರಾಗಿದ್ದಾರೆ. ಅವರಿಗೆ ಕಾಲಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 

ಕಾರ್ಯಕ್ರಮಕ್ಕೆ ನಾನು 5 ನಿಮಿಷ ತಡವಾಗಿ ತೆರಳಿದ್ದೆ. ಅಷ್ಟರಲ್ಲಾಗಲೇ ಘಟನೆ ನಡೆದು ಹೋಗಿತ್ತು. ಕೂಡಲೇ ಆಸ್ಪತ್ರೆಗೆ ಧಾವಿಸಿದೆ. ಇತರೆ ಮೂವರೂ ಕೂಡ ಸುರಕ್ಷಿತವಾಗಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!