ಬಗಾದಿ ಗೌತಮ್ 
ರಾಜ್ಯ

ಚಿಕ್ಕಮಗಳೂರು: ಕಂದಾಯ ಅಧಿಕಾರಿಗೆ ನಡುರಸ್ತೆಯಲ್ಲೇ ಡಿಸಿಯಿಂದ ಕಪಾಳಮೋಕ್ಷ!

ಪ್ರವಾಹ ಪರಿಹಾರ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕಳಸದ ಹಿರೇಬೈಲ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು: ಪ್ರವಾಹ ಪರಿಹಾರ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕಳಸದ ಹಿರೇಬೈಲ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್,  ಆರ್ ಐ ಅಜ್ಜೇ ಗೌಡ ಕತ್ತಿನ ಪಟ್ಟಿ ಹಿಡಿದು ಎಳೆದು ಕೆನ್ನೆಗೆ ಹೊಡೆದಿದ್ದಾರೆ.

ಕಳೆದ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ ಅಂಗಡಿಯಿಂದ ಖರೀದಿ ಮಾಡಿದ್ದ ರೇಶನ್ ದುಡ್ಡು ಇನ್ನೂ ಕೊಟ್ಟಿಲ್ಲ.  8 ತಿಂಗಳಾದರೂ ಹಣ ನೀಡಿಲ್ಲ ಎಂದು ಹಿರೇಬೈಲಿಗೆ ಭೇಟಿ ನೀಡಿದ್ದ ವೇಳೆ ದೂರಿದ್ದರು. 

ಕಂದಾಯ ಅಧಿಕಾರಿ ಅಜ್ಜೇಗೌಡರನ್ನು ವಿಷಯದ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್,  ಸರ್ಕಾರದಿಂದ ಹಣ ಬಂದಿದೆ. ಯಾಕೆ ಬಿಲ್ ಪಾವತಿ ಮಾಡಿಲ್ಲ ಎಂದು ಪ್ರಶ್ನಿಸಿದರು. 

ಆರ್ ಐ ( ಕಂದಾಯ ಅಧಿಕಾರಿ) ಸಮರ್ಪಕ ಉತ್ತರ ನೀಡದೆ ಇದ್ದಾಗ ಸಿಟ್ಟಿಗೆದ್ದ ಜಿಲ್ಲಾಧಿಕಾರಿ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT