ಬಗಾದಿ ಗೌತಮ್ 
ರಾಜ್ಯ

ಚಿಕ್ಕಮಗಳೂರು: ಕಂದಾಯ ಅಧಿಕಾರಿಗೆ ನಡುರಸ್ತೆಯಲ್ಲೇ ಡಿಸಿಯಿಂದ ಕಪಾಳಮೋಕ್ಷ!

ಪ್ರವಾಹ ಪರಿಹಾರ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕಳಸದ ಹಿರೇಬೈಲ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು: ಪ್ರವಾಹ ಪರಿಹಾರ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಂದಾಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕಳಸದ ಹಿರೇಬೈಲ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್,  ಆರ್ ಐ ಅಜ್ಜೇ ಗೌಡ ಕತ್ತಿನ ಪಟ್ಟಿ ಹಿಡಿದು ಎಳೆದು ಕೆನ್ನೆಗೆ ಹೊಡೆದಿದ್ದಾರೆ.

ಕಳೆದ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ ಅಂಗಡಿಯಿಂದ ಖರೀದಿ ಮಾಡಿದ್ದ ರೇಶನ್ ದುಡ್ಡು ಇನ್ನೂ ಕೊಟ್ಟಿಲ್ಲ.  8 ತಿಂಗಳಾದರೂ ಹಣ ನೀಡಿಲ್ಲ ಎಂದು ಹಿರೇಬೈಲಿಗೆ ಭೇಟಿ ನೀಡಿದ್ದ ವೇಳೆ ದೂರಿದ್ದರು. 

ಕಂದಾಯ ಅಧಿಕಾರಿ ಅಜ್ಜೇಗೌಡರನ್ನು ವಿಷಯದ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್,  ಸರ್ಕಾರದಿಂದ ಹಣ ಬಂದಿದೆ. ಯಾಕೆ ಬಿಲ್ ಪಾವತಿ ಮಾಡಿಲ್ಲ ಎಂದು ಪ್ರಶ್ನಿಸಿದರು. 

ಆರ್ ಐ ( ಕಂದಾಯ ಅಧಿಕಾರಿ) ಸಮರ್ಪಕ ಉತ್ತರ ನೀಡದೆ ಇದ್ದಾಗ ಸಿಟ್ಟಿಗೆದ್ದ ಜಿಲ್ಲಾಧಿಕಾರಿ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT