ಸಾಂದರ್ಭಿಕ ಚಿತ್ರ 
ರಾಜ್ಯ

ಹಳೆ ದ್ವೇಷದ ಹಿನ್ನೆಲೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಾನುಕುಂಟೆ ಮಾದಾಪುರ ರಸ್ತೆಯಲ್ಲಿ ರಾಜಾನುಕುಂಟೆ ಗ್ರಾಮದ ಸಂತೋಷ್ ಕುಮಾರ್ (25) ಕೊಲೆಯಾದವರು. ಇವರ ಮೇಲೆ ನಾಲ್ಕೈದು ಮಂದಿಯಿಂದ ಗುಂಪು ಹಲ್ಲೆ ಮಾಡಿ ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಿದೆ. 

ಈ ಘಟನೆಯಲ್ಲಿ ಸಂತೋಷ್ ಕುಮಾರ್  ಸ್ನೇಹಿತನ ಕೈಬೆರಳು ಸಹ ತುಂಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದ  ಸಂತೋಷ್ ಕುಮಾರ್ ಹಿಂದೆ ತನ್ನ ಸ್ನೇಹಿತನಾದ ರೌಡಿಶೀಟರ್ ಹರಿಕೆರೆ ವೇಣು ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಲ್ಲಿ ಹಲ್ಲೆಗೊಳಗಾದ ವೇಣು ಆಸ್ಪತ್ರೆಗೆ ದಾಖಲಾಗಿ ಬದುಕುಳಿದಿದ್ದ. 

ಇತ್ತ ಹಲ್ಲೆ ಮಾಡಿದ ಸಂತೋಷ್ ಕುಮಾರ್ ಜೈಲುವಾಸ ಅನುಭವಿಸಿ ಹೊರಗಡೆ  ಬಂದಿದ್ದನು. ಹೀಗಾಗಿ ರೌಡಿಶೀಟರ್ ವೇಣು ತನ್ನ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ  ಕೃತ್ಯವನ್ನು ಮಾಡಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜನಕುಂಟೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. 

ಮತ್ತೊಂದೆಡೆ ಮೃತನ ಸಂಬಂಧಿಕರು ರೌಡಿಶೀಟರ್ ವೇಣು ಹಾಗೂ ಆತನ ತಂದೆ ಸೇರಿ ಸಂತೋಷ್ ನನ್ನ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT