ಸಾಂದರ್ಭಿಕ ಚಿತ್ರ 
ರಾಜ್ಯ

ಹಳೆ ದ್ವೇಷದ ಹಿನ್ನೆಲೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಾನುಕುಂಟೆ ಮಾದಾಪುರ ರಸ್ತೆಯಲ್ಲಿ ರಾಜಾನುಕುಂಟೆ ಗ್ರಾಮದ ಸಂತೋಷ್ ಕುಮಾರ್ (25) ಕೊಲೆಯಾದವರು. ಇವರ ಮೇಲೆ ನಾಲ್ಕೈದು ಮಂದಿಯಿಂದ ಗುಂಪು ಹಲ್ಲೆ ಮಾಡಿ ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಿದೆ. 

ಈ ಘಟನೆಯಲ್ಲಿ ಸಂತೋಷ್ ಕುಮಾರ್  ಸ್ನೇಹಿತನ ಕೈಬೆರಳು ಸಹ ತುಂಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದ  ಸಂತೋಷ್ ಕುಮಾರ್ ಹಿಂದೆ ತನ್ನ ಸ್ನೇಹಿತನಾದ ರೌಡಿಶೀಟರ್ ಹರಿಕೆರೆ ವೇಣು ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಲ್ಲಿ ಹಲ್ಲೆಗೊಳಗಾದ ವೇಣು ಆಸ್ಪತ್ರೆಗೆ ದಾಖಲಾಗಿ ಬದುಕುಳಿದಿದ್ದ. 

ಇತ್ತ ಹಲ್ಲೆ ಮಾಡಿದ ಸಂತೋಷ್ ಕುಮಾರ್ ಜೈಲುವಾಸ ಅನುಭವಿಸಿ ಹೊರಗಡೆ  ಬಂದಿದ್ದನು. ಹೀಗಾಗಿ ರೌಡಿಶೀಟರ್ ವೇಣು ತನ್ನ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ  ಕೃತ್ಯವನ್ನು ಮಾಡಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜನಕುಂಟೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. 

ಮತ್ತೊಂದೆಡೆ ಮೃತನ ಸಂಬಂಧಿಕರು ರೌಡಿಶೀಟರ್ ವೇಣು ಹಾಗೂ ಆತನ ತಂದೆ ಸೇರಿ ಸಂತೋಷ್ ನನ್ನ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT