ಸಂಗ್ರಹ ಚಿತ್ರ 
ರಾಜ್ಯ

ಮೃತಪಟ್ಟ ಬಳಿಕ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕನೊಬ್ಬ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. 

ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕನೊಬ್ಬ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. 

ಸುಜನ್ (21) ಅಂಗಾಂಗ ದಾನ ಮಾಡಿದ ವಿದ್ಯಾರ್ಥಿ. ಸಿವಿನ್ ಎಂಜಿನಿಯರಿಂಗ್ ಓದುತ್ತಿದ್ದ ಸುಜನ್ ಜ.17ರಂದು ದೊಡ್ಡಬಳ್ಳಾಪುರದ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದ. ಬಳಿಕ ಆತನನ್ನು ಕೊಲಂಬಿಯಾ ಏಷ್ಯಾದಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಪಘಾತದಲ್ಲಿ ಸುದನ್ ಮೆದುಳಿಗೆ ತೀವ್ರವಾಗಿ ಗಾಯವಾಗಿದೆ ಎಂಬುದು ಸಿಟಿ ಸ್ಕ್ಯಾನ್ ಮೂಲಕ ತಿಳಿದುಬಂದಿತ್ತು. ಹಲವು ಚಿಕಿತ್ಸೆ ನೀಡಿದರು ಪ್ರಯೋಜನವಾಗಿರಲಿಲ್ಲ. ಸುಜನ್ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಬಳಿಕ ಸುಜನ್ ಕೋಮಾಗೆ ಜಾರಿದ್ದ. ತೀವ್ರ ಚಿಕಿತ್ಸೆಯ ಬಳಿಕವೂ ಚೇತರಿಕೆ ಕಂಡುಬರದ ಹಿನ್ನಲೆಯಲ್ಲಿ ವೈದ್ಯರು ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದ್ದರು. 

ಬಳಿಕ ಸುಜನ್ ಪೋಷಕರು ಮಗನ ಸ್ಥಿತಿಯನ್ನು ಅರ್ಥ ಮಾಡಿಕೊಂಡು ಅಂಗಾಗ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಇದರಂತೆ ಅಂಗಾಂಗಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಜ22ರಂದು ಕರ್ನಾಟಕದ ಕಸಿ ಪ್ರಾಧಿಕಾರ ಜೀವನ ಸಾರ್ಥಕತೆಯ ಮೂಲಕ ಪ್ರಾರಂಭವಾಗಿದ್ದು. ದಾನ ಮಾಡಲಾದ ಅಂಗಾಂಗಗಳು ಇದೀಗ ಐವರಿಗೆ ಜೀವ ನೀಡಿದೆ. 

ಮರುಪಡೆಯಲಾಗಿದ ಅಂಗಾಂಗಗಳಲ್ಲಿ ಒಂದು ಮೂತ್ರಪಿಂಡವನ್ನು ಕೊಲಂಬಿಯಾ ಏಷ್ಯಾ ಹೆಬ್ಬಾಳ ಆಸ್ಪತ್ರೆಯಲ್ಲಿದ್ದ ರೋಗಿಗೆ ನೀಡಲಾಗಿತ್ತು. ಇತರೆ ಮೂತ್ರಪಿಂಡ ಮತ್ತು ಯಕೃತ್ತನ್ನು ಸಕ್ರಾ ವರ್ಲ್ಡ್ ಆಸ್ಪತ್ರೆಯಲ್ಲಿ ಸೂಕ್ತರಿಗೆ ನೀಡಲು ಸ್ಥಲಾಂತರಿಸಲಾಗಿದೆ. ಇನ್ನು ಎರಡು ಕಾರ್ನಿಯಾಗಳನ್ನು ಮಿಂಟೋ ಕಣ್ಣಿನ ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT